ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯವನ್ನು ವಿಚಾರಿಸುತ್ತಿರುವುದು ಇಲ್ಲಿ ಕಾಣಬಹುದಾಗಿದೆ.
ಉಭಯ ನಾಯಕರು ಹಲವಾರು ವಿಚಾರಗಳನ್ನು ಇಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಕೈ ಊದಿಕೊಂಡಿರುವ ವಿಚಾರ, ಡಿಕೆಶಿ ಹೆಲಿಕಾಪ್ಟರ್ ಅಪಘಾತದ ವಿಚಾರಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಮತ್ತೆ ತೆರೆಯುವ ಬಗ್ಗೆ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಣ್ಣೀರು ಹಾಕಿಸಿದ ಬಿಜೆಪಿ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಐದು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ, ಹಳೇ ಮೈಸೂರು ಭಾಗವನ್ನು ಫುಲ್ ಕವರ್ ಮಾಡಿದ್ದೇನೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಜನರು ನಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಇದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ‘ಪ್ರಚಾರದ ಭರಾಟೆಯ ಮಧ್ಯೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ವಿಚಾರ ವಿನಿಮಯದ ತುಣುಕು ಇಲ್ಲಿದೆ. ರಾಜ್ಯದ ಆಗುಹೋಗುಗಳು, ಭವಿಷ್ಯದ ಯೋಜನೆಗಳ ಕುರಿತ ಚರ್ಚೆಯ ಸಂಪೂರ್ಣ ವಿಡಿಯೋ ಸದ್ಯದಲ್ಲಿಯೇ ಬರಲಿದೆ. ನಿರೀಕ್ಷಿಸಿ’ ಎಂದು ಕಾಂಗ್ರೆಸ್ ತಿಳಿಸಿದೆ.
ಇದನ್ನು ರೀಟ್ವೀಟ್ ಮಾಡಿಕೊಂಡಿರುವ ಟ್ವಿಟರ್ ಬಳಕೆದಾರರಾದ ಗಣೇಶ್ ಚೇತನ್ ಎಂಬುವವರು, ‘ಈ ವಿಡಿಯೋ ಕಾಂಗ್ರೆಸ್ ನ ಮಾಸ್ಟರ್ ಸ್ಟ್ರೋಕ್ ನಂತೆ ಕಾಣುತ್ತಿದೆ. ಯಡಿಯೂರಪ್ಪ ಮತ್ತು ಬಿಎಲ್ ಸಂತೋಷ್ ಅವರೊಂದಿಗೆ ನಾವು ಅಂತಹದನ್ನು ನೋಡಲು ಬಯಸುತ್ತೇವೆ. ಕುಮಾರಸ್ವಾಮಿ ಮತ್ತು ರೇವಣ್ಣ ಸಹ ಹೀಗೆ ಮಾತನಾಡಬೇಕೆಂದು ಬಯಸುತ್ತೇವೆ’ ಎಂಬುದಾಗಿ ತಿಳಿಸಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ಕಾಂಗ್ರೆಸ್ ನಾಯಕರಿಂದ ಈಗ ಬೇಕಾಗಿರುವುದು ಮತ್ತು ನಿರೀಕ್ಷಿಸುತ್ತಿರುವ ಏಕೈಕ ವಿಷಯವೆಂದರೆ ಅವರು ನೀಡಿದ ಭರವಸೆಗಳನ್ನು ಉಳಿಸಿಕೊಳ್ಳುವುದು, ಪಕ್ಷದ ಒಳಗೆ ಮತ್ತು ಹೊರಗಿನ ಭ್ರಷ್ಟರ ವಿರುದ್ಧ ಬಲಶಾಲಿಯಾಗುವುದು, ಅಭಿವೃದ್ಧಿ ಮತ್ತು ಪ್ರಯೋಜನವು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು. ಇವುಗಳು ಗ್ರಾಮ ಹಾಗೂ ನಗರಗಳಿಗೆ ತಲುಪುವಂತೆ ಮಾಡುವುದು’ ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.
https://twitter.com/INCKarnataka/status/1655123404717178880?t=HahmUHTGOUM2njiDpdzZuQ&s=08
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…