BREAKING NEWS

ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ : ಜೆ.ಪಿ.ನಡ್ಡಾ

ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ ಮತದಾರರು ತಾವು ನೀಡುವ ಮತವನ್ನು ಪೂರ್ವಾಪರ ಯೋಚಿಸಿ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಉಗ್ರಗಾಮಿ ಆರೋಪದಲ್ಲಿ ಬಂಧಿಸಲ್ಪಟ್ಟಪಿಎಫ್‌ಐ ಉಗ್ರ ಸಂಘಟನೆಯ 700ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಮುಕ್ತ ಆಗಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಠಿ ಮಾಡಿದ್ದರು. ಇಂಥವರಿಂದ ದೇಶ ಮತ್ತು ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಕರ್ನಾಟಕ ಕಾಂಗ್ರೆಸ್‌ಮುಕ್ತ ರಾಜ್ಯವಾಗಬೇಕು. ಇದಕ್ಕೆ ಮೋದಿ ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು.

lokesh

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago