BREAKING NEWS

ಪರ್ವತಾರೋಹಣಕ್ಕೆ ತೆರಳಿದ್ದ ಬೆಂಗಳೂರಿನ ಯುವಕ ನಾಪತ್ತೆ

ಹಿಮಾಚಲ ಪ್ರದೇಶ : ಬೆಂಗಳೂರಿನ ಯುವಕ ರಾಹುಲ್ ರಮೇಶ್ ಎಂಬುವರು ಕಳೆದ 6 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಬಳಿ ಅರಣ್ಯದಲ್ಲಿ ರಾಹುಲ್ ರಮೇಶ್ ಅವರು ನಾಪತ್ತೆಯಾಗಿದ್ದು, ಪರ್ವತಾ ರೋಹಣದ ವೇಳೆ ಬೆಟ್ಟದಿಂದ ಕೆಳಗೆ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

35 ವರ್ಷ ವಯಸ್ಸಿನ ರಾಹುಲ್ ರಮೇಶ್, ಮನಾಲಿಯಲ್ಲಿ ಪರ್ವತಾರೋಹಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಹಿಮಾಚಲ ಪ್ರದೇಶದ ಜೊಗ್ನಿ ಫಾಲ್ ಅರಣ್ಯದಲ್ಲಿ ತರಬೇತಿಯಲ್ಲಿ ನಿರತರಾಗಿದ್ದ ವೇಳೆ ಸೆಪ್ಟೆಂಬರ್ 28 ರಂದು ಮನಾಲಿಯಲ್ಲಿ ನಾಪತ್ತೆಯಾಗಿದ್ದರು.

ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನಾಲಿ ಡಿಎಸ್‌ಪಿ ಕೆ. ಡಿ. ಶರ್ಮಾ ಅವರ ಸಾರಥ್ಯದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ. ಕಳೆದ 4 ದಿನಗಳಿಂದಲೂ ಈ ಭಾಗದಲ್ಲಿ ಹುಡುಕಾಟ ನಡೆಯುತ್ತಿದೆ. ಇನ್ನು ಜೊಗ್ನಿ ಜಲಪಾತದ ಬಳಿ ಕೊರಕಲು ಒಂದರಲ್ಲಿ ಮೃತ ದೇಹವೊಂದು ಕಾಣ ಸಿಕ್ಕಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಇದು ಯಾರ ಮೃತ ದೇಹ ಅನ್ನೋದು ದೃಢಪಟ್ಟಿಲ್ಲ.

ಕೊರಕಲಿನಲ್ಲಿ 500 ಮೀಟರ್ ಕೆಳ ಭಾಗದಲ್ಲಿ ಮೃತ ದೇಹ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲೆ ಎತ್ತಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲಕ್ಕೆ ಎತ್ತಿ ತೆಗೆದ ಬಳಿಕವಷ್ಟೇ ಈ ಮೃತ ದೇಹ ಯಾರದ್ದು ಎಂದು ತಿಳಿದು ಬರಲಿದೆ. ಈಗಲೇ ಖಚಿತವಾಗಿ ಏನನ್ನೂ ಹೇಳಲಾಗದು ಎಂದು ಶರ್ಮಾ ಅವರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 30 ರಿಂದಲೂ ಈ ಪ್ರದೇಶದಲ್ಲಿ ರಾಹುಲ್ ರಮೇಶ್ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಪರ್ವತಾರೋಹಣ ಸ್ಪರ್ಧೆ ಆಯೋಜಿಸಿದ್ದ ಸಂಘಟಕರೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಹುಲ್ ರಮೇಶ್ ಅವರು ಭ್ರಿಗು ಸರೋವರದ ಬಳಿ ಒಬ್ಬೊಂಟಿಯಾಗಿ ಪರ್ವತಾರೋಹಣ ತರಬೇತಿಯಲ್ಲಿ ನಿರತರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ವಾಪಸ್ ಕೆಳಗೆ ಇಳಿದು ಬರುವ ವೇಳೆ ಅವರು ದಾರಿ ತಪ್ಪಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ರಾಹುಲ್ ರಮೇಶ್‌ ಅವರ ಮೊಬೈಲ್ ಸೆಪ್ಟೆಂಬರ್ 29 ರಂದು ಜೊಗ್ನಿ ಜಲಪಾತದ ಬಳಿ ಪತ್ತೆಯಾಗಿತ್ತು. ರಾಹುಲ್ ರಮೇಶ್ ಅವರು ಜಿಪಿಎಸ್‌ ಸೌಲಭ್ಯ ಇರುವ ಗಡಿಯಾರ ಕೂಡಾ ಧರಿಸಿದ್ದರು. ಆದರೆ, ಈ ವಾಚ್‌ನಿಂದಲೂ ಅವರನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ವಾಚ್‌ನಿಂದ ಈವರೆಗೆ ಯಾವುದೇ ಸಿಗ್ನಲ್ ಸಿಕ್ಕಿಲ್ಲ.

ರಾಹುಲ್ ರಮೇಶ್ ಅವರು ನಾಪತ್ತೆಯಾದ ಮಾರನೇ ದಿನದಿಂದಲೇ ಸ್ಥಳೀಯ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ಅತ್ಯಂತ ಕಡಿದಾದ ಬೆಟ್ಟಗಳಿಂದ ಕೂಡಿರುವ ಜೊಗ್ನಿ ಜಲಪಾತ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸೋದು ಸುಲಭವಲ್ಲ. ಹೀಗಾಗಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವು ಪಡೆದು ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಕಾರ್ಯ ನಿರ್ವಹಿಸುತ್ತಿದೆ. ಇನ್ನು ಮನಾಲಿಯಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ಪರ್ವತಾರೋಹಣ ಸಂಸ್ಥೆ ಕೂಡಾ ಈ ಕಾರ್ಯಾಚರಣೆಗೆ ನೆರವು ನೀಡಿದೆ.

lokesh

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

8 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

11 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

13 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

13 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

13 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

14 hours ago