BREAKING NEWS

ಪರ್ವತಾರೋಹಣಕ್ಕೆ ತೆರಳಿದ್ದ ಬೆಂಗಳೂರಿನ ಯುವಕ ನಾಪತ್ತೆ

ಹಿಮಾಚಲ ಪ್ರದೇಶ : ಬೆಂಗಳೂರಿನ ಯುವಕ ರಾಹುಲ್ ರಮೇಶ್ ಎಂಬುವರು ಕಳೆದ 6 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಬಳಿ ಅರಣ್ಯದಲ್ಲಿ ರಾಹುಲ್ ರಮೇಶ್ ಅವರು ನಾಪತ್ತೆಯಾಗಿದ್ದು, ಪರ್ವತಾ ರೋಹಣದ ವೇಳೆ ಬೆಟ್ಟದಿಂದ ಕೆಳಗೆ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

35 ವರ್ಷ ವಯಸ್ಸಿನ ರಾಹುಲ್ ರಮೇಶ್, ಮನಾಲಿಯಲ್ಲಿ ಪರ್ವತಾರೋಹಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಹಿಮಾಚಲ ಪ್ರದೇಶದ ಜೊಗ್ನಿ ಫಾಲ್ ಅರಣ್ಯದಲ್ಲಿ ತರಬೇತಿಯಲ್ಲಿ ನಿರತರಾಗಿದ್ದ ವೇಳೆ ಸೆಪ್ಟೆಂಬರ್ 28 ರಂದು ಮನಾಲಿಯಲ್ಲಿ ನಾಪತ್ತೆಯಾಗಿದ್ದರು.

ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನಾಲಿ ಡಿಎಸ್‌ಪಿ ಕೆ. ಡಿ. ಶರ್ಮಾ ಅವರ ಸಾರಥ್ಯದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ. ಕಳೆದ 4 ದಿನಗಳಿಂದಲೂ ಈ ಭಾಗದಲ್ಲಿ ಹುಡುಕಾಟ ನಡೆಯುತ್ತಿದೆ. ಇನ್ನು ಜೊಗ್ನಿ ಜಲಪಾತದ ಬಳಿ ಕೊರಕಲು ಒಂದರಲ್ಲಿ ಮೃತ ದೇಹವೊಂದು ಕಾಣ ಸಿಕ್ಕಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಇದು ಯಾರ ಮೃತ ದೇಹ ಅನ್ನೋದು ದೃಢಪಟ್ಟಿಲ್ಲ.

ಕೊರಕಲಿನಲ್ಲಿ 500 ಮೀಟರ್ ಕೆಳ ಭಾಗದಲ್ಲಿ ಮೃತ ದೇಹ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲೆ ಎತ್ತಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲಕ್ಕೆ ಎತ್ತಿ ತೆಗೆದ ಬಳಿಕವಷ್ಟೇ ಈ ಮೃತ ದೇಹ ಯಾರದ್ದು ಎಂದು ತಿಳಿದು ಬರಲಿದೆ. ಈಗಲೇ ಖಚಿತವಾಗಿ ಏನನ್ನೂ ಹೇಳಲಾಗದು ಎಂದು ಶರ್ಮಾ ಅವರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 30 ರಿಂದಲೂ ಈ ಪ್ರದೇಶದಲ್ಲಿ ರಾಹುಲ್ ರಮೇಶ್ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಪರ್ವತಾರೋಹಣ ಸ್ಪರ್ಧೆ ಆಯೋಜಿಸಿದ್ದ ಸಂಘಟಕರೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಹುಲ್ ರಮೇಶ್ ಅವರು ಭ್ರಿಗು ಸರೋವರದ ಬಳಿ ಒಬ್ಬೊಂಟಿಯಾಗಿ ಪರ್ವತಾರೋಹಣ ತರಬೇತಿಯಲ್ಲಿ ನಿರತರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ವಾಪಸ್ ಕೆಳಗೆ ಇಳಿದು ಬರುವ ವೇಳೆ ಅವರು ದಾರಿ ತಪ್ಪಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ರಾಹುಲ್ ರಮೇಶ್‌ ಅವರ ಮೊಬೈಲ್ ಸೆಪ್ಟೆಂಬರ್ 29 ರಂದು ಜೊಗ್ನಿ ಜಲಪಾತದ ಬಳಿ ಪತ್ತೆಯಾಗಿತ್ತು. ರಾಹುಲ್ ರಮೇಶ್ ಅವರು ಜಿಪಿಎಸ್‌ ಸೌಲಭ್ಯ ಇರುವ ಗಡಿಯಾರ ಕೂಡಾ ಧರಿಸಿದ್ದರು. ಆದರೆ, ಈ ವಾಚ್‌ನಿಂದಲೂ ಅವರನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ವಾಚ್‌ನಿಂದ ಈವರೆಗೆ ಯಾವುದೇ ಸಿಗ್ನಲ್ ಸಿಕ್ಕಿಲ್ಲ.

ರಾಹುಲ್ ರಮೇಶ್ ಅವರು ನಾಪತ್ತೆಯಾದ ಮಾರನೇ ದಿನದಿಂದಲೇ ಸ್ಥಳೀಯ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ಅತ್ಯಂತ ಕಡಿದಾದ ಬೆಟ್ಟಗಳಿಂದ ಕೂಡಿರುವ ಜೊಗ್ನಿ ಜಲಪಾತ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸೋದು ಸುಲಭವಲ್ಲ. ಹೀಗಾಗಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವು ಪಡೆದು ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಕಾರ್ಯ ನಿರ್ವಹಿಸುತ್ತಿದೆ. ಇನ್ನು ಮನಾಲಿಯಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ಪರ್ವತಾರೋಹಣ ಸಂಸ್ಥೆ ಕೂಡಾ ಈ ಕಾರ್ಯಾಚರಣೆಗೆ ನೆರವು ನೀಡಿದೆ.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

30 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

35 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

45 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago