BREAKING NEWS

ಪರ್ವತಾರೋಹಣಕ್ಕೆ ತೆರಳಿದ್ದ ಬೆಂಗಳೂರಿನ ಯುವಕ ನಾಪತ್ತೆ

ಹಿಮಾಚಲ ಪ್ರದೇಶ : ಬೆಂಗಳೂರಿನ ಯುವಕ ರಾಹುಲ್ ರಮೇಶ್ ಎಂಬುವರು ಕಳೆದ 6 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಬಳಿ ಅರಣ್ಯದಲ್ಲಿ ರಾಹುಲ್ ರಮೇಶ್ ಅವರು ನಾಪತ್ತೆಯಾಗಿದ್ದು, ಪರ್ವತಾ ರೋಹಣದ ವೇಳೆ ಬೆಟ್ಟದಿಂದ ಕೆಳಗೆ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

35 ವರ್ಷ ವಯಸ್ಸಿನ ರಾಹುಲ್ ರಮೇಶ್, ಮನಾಲಿಯಲ್ಲಿ ಪರ್ವತಾರೋಹಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಹಿಮಾಚಲ ಪ್ರದೇಶದ ಜೊಗ್ನಿ ಫಾಲ್ ಅರಣ್ಯದಲ್ಲಿ ತರಬೇತಿಯಲ್ಲಿ ನಿರತರಾಗಿದ್ದ ವೇಳೆ ಸೆಪ್ಟೆಂಬರ್ 28 ರಂದು ಮನಾಲಿಯಲ್ಲಿ ನಾಪತ್ತೆಯಾಗಿದ್ದರು.

ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನಾಲಿ ಡಿಎಸ್‌ಪಿ ಕೆ. ಡಿ. ಶರ್ಮಾ ಅವರ ಸಾರಥ್ಯದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ. ಕಳೆದ 4 ದಿನಗಳಿಂದಲೂ ಈ ಭಾಗದಲ್ಲಿ ಹುಡುಕಾಟ ನಡೆಯುತ್ತಿದೆ. ಇನ್ನು ಜೊಗ್ನಿ ಜಲಪಾತದ ಬಳಿ ಕೊರಕಲು ಒಂದರಲ್ಲಿ ಮೃತ ದೇಹವೊಂದು ಕಾಣ ಸಿಕ್ಕಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಇದು ಯಾರ ಮೃತ ದೇಹ ಅನ್ನೋದು ದೃಢಪಟ್ಟಿಲ್ಲ.

ಕೊರಕಲಿನಲ್ಲಿ 500 ಮೀಟರ್ ಕೆಳ ಭಾಗದಲ್ಲಿ ಮೃತ ದೇಹ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲೆ ಎತ್ತಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲಕ್ಕೆ ಎತ್ತಿ ತೆಗೆದ ಬಳಿಕವಷ್ಟೇ ಈ ಮೃತ ದೇಹ ಯಾರದ್ದು ಎಂದು ತಿಳಿದು ಬರಲಿದೆ. ಈಗಲೇ ಖಚಿತವಾಗಿ ಏನನ್ನೂ ಹೇಳಲಾಗದು ಎಂದು ಶರ್ಮಾ ಅವರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 30 ರಿಂದಲೂ ಈ ಪ್ರದೇಶದಲ್ಲಿ ರಾಹುಲ್ ರಮೇಶ್ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಪರ್ವತಾರೋಹಣ ಸ್ಪರ್ಧೆ ಆಯೋಜಿಸಿದ್ದ ಸಂಘಟಕರೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಹುಲ್ ರಮೇಶ್ ಅವರು ಭ್ರಿಗು ಸರೋವರದ ಬಳಿ ಒಬ್ಬೊಂಟಿಯಾಗಿ ಪರ್ವತಾರೋಹಣ ತರಬೇತಿಯಲ್ಲಿ ನಿರತರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ವಾಪಸ್ ಕೆಳಗೆ ಇಳಿದು ಬರುವ ವೇಳೆ ಅವರು ದಾರಿ ತಪ್ಪಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ರಾಹುಲ್ ರಮೇಶ್‌ ಅವರ ಮೊಬೈಲ್ ಸೆಪ್ಟೆಂಬರ್ 29 ರಂದು ಜೊಗ್ನಿ ಜಲಪಾತದ ಬಳಿ ಪತ್ತೆಯಾಗಿತ್ತು. ರಾಹುಲ್ ರಮೇಶ್ ಅವರು ಜಿಪಿಎಸ್‌ ಸೌಲಭ್ಯ ಇರುವ ಗಡಿಯಾರ ಕೂಡಾ ಧರಿಸಿದ್ದರು. ಆದರೆ, ಈ ವಾಚ್‌ನಿಂದಲೂ ಅವರನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ವಾಚ್‌ನಿಂದ ಈವರೆಗೆ ಯಾವುದೇ ಸಿಗ್ನಲ್ ಸಿಕ್ಕಿಲ್ಲ.

ರಾಹುಲ್ ರಮೇಶ್ ಅವರು ನಾಪತ್ತೆಯಾದ ಮಾರನೇ ದಿನದಿಂದಲೇ ಸ್ಥಳೀಯ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ಅತ್ಯಂತ ಕಡಿದಾದ ಬೆಟ್ಟಗಳಿಂದ ಕೂಡಿರುವ ಜೊಗ್ನಿ ಜಲಪಾತ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸೋದು ಸುಲಭವಲ್ಲ. ಹೀಗಾಗಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವು ಪಡೆದು ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಕಾರ್ಯ ನಿರ್ವಹಿಸುತ್ತಿದೆ. ಇನ್ನು ಮನಾಲಿಯಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ಪರ್ವತಾರೋಹಣ ಸಂಸ್ಥೆ ಕೂಡಾ ಈ ಕಾರ್ಯಾಚರಣೆಗೆ ನೆರವು ನೀಡಿದೆ.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago