BREAKING NEWS

ಪರ್ವತಾರೋಹಣಕ್ಕೆ ತೆರಳಿದ್ದ ಬೆಂಗಳೂರಿನ ಯುವಕ ನಾಪತ್ತೆ

ಹಿಮಾಚಲ ಪ್ರದೇಶ : ಬೆಂಗಳೂರಿನ ಯುವಕ ರಾಹುಲ್ ರಮೇಶ್ ಎಂಬುವರು ಕಳೆದ 6 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಮನಾಲಿ ಬಳಿ ಅರಣ್ಯದಲ್ಲಿ ರಾಹುಲ್ ರಮೇಶ್ ಅವರು ನಾಪತ್ತೆಯಾಗಿದ್ದು, ಪರ್ವತಾ ರೋಹಣದ ವೇಳೆ ಬೆಟ್ಟದಿಂದ ಕೆಳಗೆ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

35 ವರ್ಷ ವಯಸ್ಸಿನ ರಾಹುಲ್ ರಮೇಶ್, ಮನಾಲಿಯಲ್ಲಿ ಪರ್ವತಾರೋಹಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸಂಬಂಧ ಹಿಮಾಚಲ ಪ್ರದೇಶದ ಜೊಗ್ನಿ ಫಾಲ್ ಅರಣ್ಯದಲ್ಲಿ ತರಬೇತಿಯಲ್ಲಿ ನಿರತರಾಗಿದ್ದ ವೇಳೆ ಸೆಪ್ಟೆಂಬರ್ 28 ರಂದು ಮನಾಲಿಯಲ್ಲಿ ನಾಪತ್ತೆಯಾಗಿದ್ದರು.

ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನಾಲಿ ಡಿಎಸ್‌ಪಿ ಕೆ. ಡಿ. ಶರ್ಮಾ ಅವರ ಸಾರಥ್ಯದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ. ಕಳೆದ 4 ದಿನಗಳಿಂದಲೂ ಈ ಭಾಗದಲ್ಲಿ ಹುಡುಕಾಟ ನಡೆಯುತ್ತಿದೆ. ಇನ್ನು ಜೊಗ್ನಿ ಜಲಪಾತದ ಬಳಿ ಕೊರಕಲು ಒಂದರಲ್ಲಿ ಮೃತ ದೇಹವೊಂದು ಕಾಣ ಸಿಕ್ಕಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಇದು ಯಾರ ಮೃತ ದೇಹ ಅನ್ನೋದು ದೃಢಪಟ್ಟಿಲ್ಲ.

ಕೊರಕಲಿನಲ್ಲಿ 500 ಮೀಟರ್ ಕೆಳ ಭಾಗದಲ್ಲಿ ಮೃತ ದೇಹ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲೆ ಎತ್ತಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ದೇಹವನ್ನು ಮೇಲಕ್ಕೆ ಎತ್ತಿ ತೆಗೆದ ಬಳಿಕವಷ್ಟೇ ಈ ಮೃತ ದೇಹ ಯಾರದ್ದು ಎಂದು ತಿಳಿದು ಬರಲಿದೆ. ಈಗಲೇ ಖಚಿತವಾಗಿ ಏನನ್ನೂ ಹೇಳಲಾಗದು ಎಂದು ಶರ್ಮಾ ಅವರು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 30 ರಿಂದಲೂ ಈ ಪ್ರದೇಶದಲ್ಲಿ ರಾಹುಲ್ ರಮೇಶ್ ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಸಂಬಂಧ ಪರ್ವತಾರೋಹಣ ಸ್ಪರ್ಧೆ ಆಯೋಜಿಸಿದ್ದ ಸಂಘಟಕರೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಹುಲ್ ರಮೇಶ್ ಅವರು ಭ್ರಿಗು ಸರೋವರದ ಬಳಿ ಒಬ್ಬೊಂಟಿಯಾಗಿ ಪರ್ವತಾರೋಹಣ ತರಬೇತಿಯಲ್ಲಿ ನಿರತರಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ವಾಪಸ್ ಕೆಳಗೆ ಇಳಿದು ಬರುವ ವೇಳೆ ಅವರು ದಾರಿ ತಪ್ಪಿರಬಹುದು ಎಂದು ಅಂದಾಜಿಸಿದ್ದಾರೆ.

ಇನ್ನು ರಾಹುಲ್ ರಮೇಶ್‌ ಅವರ ಮೊಬೈಲ್ ಸೆಪ್ಟೆಂಬರ್ 29 ರಂದು ಜೊಗ್ನಿ ಜಲಪಾತದ ಬಳಿ ಪತ್ತೆಯಾಗಿತ್ತು. ರಾಹುಲ್ ರಮೇಶ್ ಅವರು ಜಿಪಿಎಸ್‌ ಸೌಲಭ್ಯ ಇರುವ ಗಡಿಯಾರ ಕೂಡಾ ಧರಿಸಿದ್ದರು. ಆದರೆ, ಈ ವಾಚ್‌ನಿಂದಲೂ ಅವರನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ವಾಚ್‌ನಿಂದ ಈವರೆಗೆ ಯಾವುದೇ ಸಿಗ್ನಲ್ ಸಿಕ್ಕಿಲ್ಲ.

ರಾಹುಲ್ ರಮೇಶ್ ಅವರು ನಾಪತ್ತೆಯಾದ ಮಾರನೇ ದಿನದಿಂದಲೇ ಸ್ಥಳೀಯ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ಅತ್ಯಂತ ಕಡಿದಾದ ಬೆಟ್ಟಗಳಿಂದ ಕೂಡಿರುವ ಜೊಗ್ನಿ ಜಲಪಾತ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸೋದು ಸುಲಭವಲ್ಲ. ಹೀಗಾಗಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವು ಪಡೆದು ರಾಜ್ಯ ವಿಪತ್ತು ನಿರ್ವಹಣಾ ಪಡೆಯು ಕಾರ್ಯ ನಿರ್ವಹಿಸುತ್ತಿದೆ. ಇನ್ನು ಮನಾಲಿಯಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ಪರ್ವತಾರೋಹಣ ಸಂಸ್ಥೆ ಕೂಡಾ ಈ ಕಾರ್ಯಾಚರಣೆಗೆ ನೆರವು ನೀಡಿದೆ.

lokesh

Recent Posts

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

27 mins ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

9 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

13 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

13 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

13 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

13 hours ago