BREAKING NEWS

ಬೆಂಗಳೂರಲ್ಲಿ ಕಾರು ಹತ್ತಿಸಿ ಯುವಕನ ಕೊಲೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ.

ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ.

ಅಸ್ಗರ್ ಹಾಗೂ ಅಮ್ರಿನ್ ಪರಿಚಯಸ್ಥರು. ಅಸ್ಗರ್ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದನು. ಅಂತೆಯೇ ಆರೋಪಿ, ಅಸ್ಗರ್ ಬಳಿ ಕಾರೊಂದನ್ನು ಖರೀದಿಸಿದ್ದರು. ಬಳಿಕ ನಾಲ್ಕು ಲಕ್ಷ ಹಣದ ವಿಚಾರಕ್ಕೆ ಆರೋಪಿ ಹಾಗೂ ಅಸ್ಗರ್ ಮಧ್ಯೆ ಜಗಳ ನಡೆದಿದೆ. ಈ ಗಲಾಟೆ ತಾರಕಕ್ಕೇರಿ ಅಸ್ಗರ್ ಮೇಲೆ ಆರೋಪಿ ಹಲ್ಲೆ ಮಾಡಿದ್ದನು.

ಈ ಸಂಬಂಧ ಅಸ್ಗರ್, ಜೆಸಿ ನಗರ ಠಾಣೆಗೆ ದೂರು ನೀಡಿದ್ದ. ದೂರಿನ ಹಿನ್ನೆಲೆ ಜೆ.ಸಿ ನಗರ ಪೊಲೀಸರು ಆರೋಪಿ ವಿರುದ್ಧ 307 ಕೇಸ್ ಹಾಕಿದ್ದರು. ನಂತರ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಅಸ್ಗರ್‍ ಗೆ ಆರೋಪಿ ಒತ್ತಡ ಹಾಕಿದ್ದ. ಈ ಸಂಬಂಧ ಫೋನ್ ಮಾಡಿ ಮಾತಾಡೋಣ ಅಂತಾ ಕರೆದಿದ್ದ. ಅಂತೆಯೇ ಮಾತನಾಡಲೆಂದು ಬಂದಿದ್ದ ಅಸ್ಗರ್ ಬಳಿಯೂ ಕೇಸ್ ವಾಪಸ್ ತಗೋ ಎಂದು ಅಮ್ರಿನ್ ಹೇಳಿದ್ದಾನೆ. ಈ ವೇಳೆ ಅಸ್ಗರ್, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳಲ್ಲ ಅಂತಾ ಹೇಳಿ ಹೊರಟಿದ್ದ.

ಅಮ್ರಿನ್ ಜೊತೆ ಮಾತನಾಡಲು ಬರುವಾಗ ಅಸ್ಗರ್ ತನ್ನ ಗೆಳೆಯನನ್ನು ಕರೆದುಕೊಂಡು ಬಂದಿದೆ. ಅಂತೆಯೇ ಜೊತೆಗಿದ್ದ ಗೆಳೆಯನ ಡ್ರಾಪ್ ಮಾಡಲು ಅಸ್ಗರ್ ಪಾಟರಿ ರಸ್ತೆಗೆ ಬಂದಿದ್ದ. ಈ ವೇಳೆ ಅಮ್ರಿನ್ ಸ್ಕಾರ್ಪಿಯೋ ಕಾರಿನಿಂದ ಬೈಕ್‍ಗೆ ಡಿಕ್ಕಿ ಹೊಡೆಸಿದ್ದಾನೆ. ಸ್ಪೀಡಾಗಿ ಬಂದು ಬೈಕ್‍ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದ. ಘಟನೆಯಲ್ಲಿ ಗಂಭೀರ ಗಾಯಗೊಂಡು ಅಸ್ಗರ್ ಸಾವನ್ನಪ್ಪಿದರೆ, ಆತನ ಸ್ನೇಹಿತನಿಗೆ ಕೈ ಕಾಲಿಗೆ ಗಂಭೀರ ಗಾಯಗಳಾಗಿವೆ.

ಮೊದಲು ಆಕ್ಸಿಡೆಂಟ್ ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರಿ ಪೊಲೀಸರು, ಅಸ್ಗರ್ ಗೆಳೆಯನ ಹೇಳಿಕೆ ಬಳಿಕ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಪ್ರಕರಣ ಸಂಬಂಧ ಆರೋಪಿ ಅಮ್ರಿನ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

lokesh

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

4 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

5 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

5 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

5 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

6 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

6 hours ago