Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು

ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಈ ವೇಳೆ ಆತ ಕಾಲು ಜಾರಿ ಬಿದ್ದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.

ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಸಂಬಂಧ ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!