ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಈ ವೇಳೆ ಆತ ಕಾಲು ಜಾರಿ ಬಿದ್ದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಸಂಬಂಧ ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…