ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.
ಹೋಲಿ ಗೇಟ್ ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು.
ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಎಸ್ಎಸ್ಪಿ ಶೈಲೇಶ್ ಕುಮಾರ್ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…