BREAKING NEWS

ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗಿ: ಸಂಸದ ರಾಘವ್ ಚಡ್ಡಾ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಾಳೆಯಿಂದ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಪ್ರಕಟಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಇಂದು ನಡೆದ ಎಎಪಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ರಾಘವ್ ಚಡ್ಡಾ, ದೆಹಲಿಯಲ್ಲಿ ಆಡಳಿತ ನಿಯಂತ್ರಣ ಸೇವೆಗಳ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ವಿರೋಧಿಸುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದರು.

ಸೋಮವಾರ ಬೆಂಗಳೂರಿನಲ್ಲಿ  ಔತಣಕೂಟದಿಂದ ಪ್ರಾರಂಭವಾಗುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗವಹಿಸಲಿದೆ ಎಂದು ತಿಳಿಸಿದರು.

ದೆಹಲಿ ಆಡಳಿತ ಸೇವೆ ಕುರಿತ ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ಕಾಂಗ್ರೆಸ್ ವಿರೋಧಿಸಿದರೆ ಮಾತ್ರ ಬೆಂಗಳೂರಿನಲ್ಲಿ ಸಭೆ ಸೇರುವುದಾಗಿ ಎಎಪಿ ಈ ಹಿಂದೆ ಹೇಳಿತ್ತು.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ನಡೆಯುತ್ತಿರುವ ವಿಪಕ್ಷಗಳ ಎರಡನೇ ಸಭೆ ಇದಾಗಿದೆ. ಈ ಬಾರಿ 24 ವಿಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ.

ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ನಿರ್ಧರಿಸಿದ್ದರು.

andolanait

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

13 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

31 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

60 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

2 hours ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago