BREAKING NEWS

ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗಿ: ಸಂಸದ ರಾಘವ್ ಚಡ್ಡಾ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಾಳೆಯಿಂದ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಪ್ರಕಟಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಇಂದು ನಡೆದ ಎಎಪಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ರಾಘವ್ ಚಡ್ಡಾ, ದೆಹಲಿಯಲ್ಲಿ ಆಡಳಿತ ನಿಯಂತ್ರಣ ಸೇವೆಗಳ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ವಿರೋಧಿಸುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದರು.

ಸೋಮವಾರ ಬೆಂಗಳೂರಿನಲ್ಲಿ  ಔತಣಕೂಟದಿಂದ ಪ್ರಾರಂಭವಾಗುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗವಹಿಸಲಿದೆ ಎಂದು ತಿಳಿಸಿದರು.

ದೆಹಲಿ ಆಡಳಿತ ಸೇವೆ ಕುರಿತ ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ಕಾಂಗ್ರೆಸ್ ವಿರೋಧಿಸಿದರೆ ಮಾತ್ರ ಬೆಂಗಳೂರಿನಲ್ಲಿ ಸಭೆ ಸೇರುವುದಾಗಿ ಎಎಪಿ ಈ ಹಿಂದೆ ಹೇಳಿತ್ತು.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ನಡೆಯುತ್ತಿರುವ ವಿಪಕ್ಷಗಳ ಎರಡನೇ ಸಭೆ ಇದಾಗಿದೆ. ಈ ಬಾರಿ 24 ವಿಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ.

ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ನಿರ್ಧರಿಸಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

19 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago