ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಾಳೆಯಿಂದ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಪ್ರಕಟಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಇಂದು ನಡೆದ ಎಎಪಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ರಾಘವ್ ಚಡ್ಡಾ, ದೆಹಲಿಯಲ್ಲಿ ಆಡಳಿತ ನಿಯಂತ್ರಣ ಸೇವೆಗಳ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ವಿರೋಧಿಸುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದರು.
ಸೋಮವಾರ ಬೆಂಗಳೂರಿನಲ್ಲಿ ಔತಣಕೂಟದಿಂದ ಪ್ರಾರಂಭವಾಗುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗವಹಿಸಲಿದೆ ಎಂದು ತಿಳಿಸಿದರು.
ದೆಹಲಿ ಆಡಳಿತ ಸೇವೆ ಕುರಿತ ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ಕಾಂಗ್ರೆಸ್ ವಿರೋಧಿಸಿದರೆ ಮಾತ್ರ ಬೆಂಗಳೂರಿನಲ್ಲಿ ಸಭೆ ಸೇರುವುದಾಗಿ ಎಎಪಿ ಈ ಹಿಂದೆ ಹೇಳಿತ್ತು.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ನಡೆಯುತ್ತಿರುವ ವಿಪಕ್ಷಗಳ ಎರಡನೇ ಸಭೆ ಇದಾಗಿದೆ. ಈ ಬಾರಿ 24 ವಿಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ.
ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ನಿರ್ಧರಿಸಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…