ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡ “ಇಂಡಿಯಾ ಮೈತ್ರಿ ಕೂಟ”ದಲ್ಲಿನ ಮೈತ್ರಿಯನ್ನು ಆಮ್ಆದ್ಮಿ ಪಕ್ಷ (ಎಎಪಿ) ಮುರಿದುಕೊಂಡಿದೆ.
ತಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಬಗ್ಗೆ ಎಎಪಿ ಮಾಹಿತಿ ನೀಡಿದೆ.
ಅಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ ಐಎನ್ಡಿಐಎ ಮೈತ್ರಿ ಬಿಟ್ಟು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ. ನಮ್ಮ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಹೊರತು ವಿಧಾನ ಸಭಾ ಚುನಾವಣೆಗೆ ಅಲ್ಲ ಎಂದು ಆಮ್ಆದ್ಮಿ ಪಾರ್ಟಿ ತಿಳಿಸಿದೆ.
ಈ ಸಂಬಂಧ ದೆಹಲಿ ಸಚಿವ ಗೋಪಾಲ್ ರೈ ಅವರು ಮಾತನಾಡಿದ್ದು, ಐಎನ್ಡಿಐಎ ಅಸ್ತಿತ್ವಕ್ಕೆ ಬಂದ ದಿನದಿಂದಲೇ ಇದು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುಣಾವಣೆಗೆ ಮುನ್ನವೇ ನಾವು ಮೈತ್ರಿ ಬಗ್ಗೆ ಸ್ಪಷ್ಟವಾಗಿದ್ದೇವೆ. ನಮ್ಮ ಮೈತ್ರಿಯೂ ವಿಧಾನಸಭಾ ಚುನಾವಣೆಗೆ ಮಾತ್ರ ಕೇವಲ ಮೀಸಲಿದೆ. ಕಳೆದ ಬಾರಿಯ ಚುನಾವಣೆಯಂತೆ ಈ ಬಾರಿಯೂ ನಾವು ನಮ್ಮ ಸಂಪೂರ್ಣ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಎಸುರಿಸಲಿದ್ದೇವೆ ಎಂದು ಗೋಪಾಲ್ ರೈ ತಿಳಿಸಿದರು.
ಈ ಸಂಬಂಧ ಜೂನ್. 8ರಂದು ಕೌನ್ಸಿಲರ್ಗಳ ಸಭೆ ಕರೆದಿದ್ದೇವೆ. ಬಳಿಕ ಜೂನ್. 13ರಂದು ಎಲ್ಲಾ ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಮೂಲಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ವಿವರಿಸಿದರು.
ಇನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿಷಯಕ್ಕೆ ಸಂಬಂಧಿಸಿದಂತೆ, ಅವರು ಜೈಲಿನಲ್ಲಿರುವ ಕಾರಣ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಖಡಕ್ ಉತ್ತರ ನೀಡಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…