BREAKING NEWS

ಐಎನ್‌ಡಿಐಎ ಜೊತೆಗಿನ ಮೈತ್ರಿಗೆ ಗುಡ್‌ಬೈ ಹೇಳಿದ ಆಪ್‌: ಇಲ್ಲಿದೆ ಕಾರಣ!

ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡ “ಇಂಡಿಯಾ ಮೈತ್ರಿ ಕೂಟ”ದಲ್ಲಿನ ಮೈತ್ರಿಯನ್ನು ಆಮ್‌ಆದ್ಮಿ ಪಕ್ಷ (ಎಎಪಿ) ಮುರಿದುಕೊಂಡಿದೆ.

ತಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಬಗ್ಗೆ ಎಎಪಿ ಮಾಹಿತಿ ನೀಡಿದೆ.

ಅಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ ಐಎನ್‌ಡಿಐಎ ಮೈತ್ರಿ ಬಿಟ್ಟು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ. ನಮ್ಮ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಹೊರತು ವಿಧಾನ ಸಭಾ ಚುನಾವಣೆಗೆ ಅಲ್ಲ ಎಂದು ಆಮ್‌ಆದ್ಮಿ ಪಾರ್ಟಿ ತಿಳಿಸಿದೆ.

ಈ ಸಂಬಂಧ ದೆಹಲಿ ಸಚಿವ ಗೋಪಾಲ್‌ ರೈ ಅವರು ಮಾತನಾಡಿದ್ದು, ಐಎನ್‌ಡಿಐಎ ಅಸ್ತಿತ್ವಕ್ಕೆ ಬಂದ ದಿನದಿಂದಲೇ ಇದು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಚುಣಾವಣೆಗೆ ಮುನ್ನವೇ ನಾವು ಮೈತ್ರಿ ಬಗ್ಗೆ ಸ್ಪಷ್ಟವಾಗಿದ್ದೇವೆ. ನಮ್ಮ ಮೈತ್ರಿಯೂ ವಿಧಾನಸಭಾ ಚುನಾವಣೆಗೆ ಮಾತ್ರ ಕೇವಲ ಮೀಸಲಿದೆ. ಕಳೆದ ಬಾರಿಯ ಚುನಾವಣೆಯಂತೆ ಈ ಬಾರಿಯೂ ನಾವು ನಮ್ಮ ಸಂಪೂರ್ಣ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಎಸುರಿಸಲಿದ್ದೇವೆ ಎಂದು ಗೋಪಾಲ್‌ ರೈ ತಿಳಿಸಿದರು.

ಈ ಸಂಬಂಧ ಜೂನ್‌. 8ರಂದು ಕೌನ್ಸಿಲರ್‌ಗಳ ಸಭೆ ಕರೆದಿದ್ದೇವೆ. ಬಳಿಕ ಜೂನ್‌. 13ರಂದು ಎಲ್ಲಾ ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಮೂಲಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ವಿವರಿಸಿದರು.

ಇನ್ನು ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನ ವಿಷಯಕ್ಕೆ ಸಂಬಂಧಿಸಿದಂತೆ, ಅವರು ಜೈಲಿನಲ್ಲಿರುವ ಕಾರಣ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಖಡಕ್‌ ಉತ್ತರ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್ ಕಾರ್ಟೂನ್

ಮಹಾಪಂಚ್ ಕಾರ್ಟೂನ್ | ಡಿಸೆಂಬರ್ 13 ಶನಿವಾರ  

14 mins ago

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

13 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

14 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

14 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

14 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

14 hours ago