ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡ “ಇಂಡಿಯಾ ಮೈತ್ರಿ ಕೂಟ”ದಲ್ಲಿನ ಮೈತ್ರಿಯನ್ನು ಆಮ್ಆದ್ಮಿ ಪಕ್ಷ (ಎಎಪಿ) ಮುರಿದುಕೊಂಡಿದೆ.
ತಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಬಗ್ಗೆ ಎಎಪಿ ಮಾಹಿತಿ ನೀಡಿದೆ.
ಅಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ ಐಎನ್ಡಿಐಎ ಮೈತ್ರಿ ಬಿಟ್ಟು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ. ನಮ್ಮ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಹೊರತು ವಿಧಾನ ಸಭಾ ಚುನಾವಣೆಗೆ ಅಲ್ಲ ಎಂದು ಆಮ್ಆದ್ಮಿ ಪಾರ್ಟಿ ತಿಳಿಸಿದೆ.
ಈ ಸಂಬಂಧ ದೆಹಲಿ ಸಚಿವ ಗೋಪಾಲ್ ರೈ ಅವರು ಮಾತನಾಡಿದ್ದು, ಐಎನ್ಡಿಐಎ ಅಸ್ತಿತ್ವಕ್ಕೆ ಬಂದ ದಿನದಿಂದಲೇ ಇದು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುಣಾವಣೆಗೆ ಮುನ್ನವೇ ನಾವು ಮೈತ್ರಿ ಬಗ್ಗೆ ಸ್ಪಷ್ಟವಾಗಿದ್ದೇವೆ. ನಮ್ಮ ಮೈತ್ರಿಯೂ ವಿಧಾನಸಭಾ ಚುನಾವಣೆಗೆ ಮಾತ್ರ ಕೇವಲ ಮೀಸಲಿದೆ. ಕಳೆದ ಬಾರಿಯ ಚುನಾವಣೆಯಂತೆ ಈ ಬಾರಿಯೂ ನಾವು ನಮ್ಮ ಸಂಪೂರ್ಣ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಎಸುರಿಸಲಿದ್ದೇವೆ ಎಂದು ಗೋಪಾಲ್ ರೈ ತಿಳಿಸಿದರು.
ಈ ಸಂಬಂಧ ಜೂನ್. 8ರಂದು ಕೌನ್ಸಿಲರ್ಗಳ ಸಭೆ ಕರೆದಿದ್ದೇವೆ. ಬಳಿಕ ಜೂನ್. 13ರಂದು ಎಲ್ಲಾ ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಮೂಲಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ವಿವರಿಸಿದರು.
ಇನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿಷಯಕ್ಕೆ ಸಂಬಂಧಿಸಿದಂತೆ, ಅವರು ಜೈಲಿನಲ್ಲಿರುವ ಕಾರಣ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಖಡಕ್ ಉತ್ತರ ನೀಡಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…