BREAKING NEWS

ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ : ಪಕ್ಷದ ಕಾರ್ಯಕರ್ತರಿಂದ ದೂರು

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ ಶಾಸಕ ರಘು ಬೆಂಬಲಿಗರಿಂದ ಹಲ್ಲೆ ಮಾಡಲಾಗಿದೆ. ಕೊವಿಡ್ ಸಮಯದಲ್ಲಿ ನಿಮ್ಮ ಪಕ್ಷದಿಂದ ಏನ್ ಮಾಡಿದ್ದೀರಿ. ನಮಗೆ ನಮ್ಮ ಶಾಸಕರೇ ಸಾಕು. ನೀವು ಇಲ್ಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಪ್ರಚಾರದ ವೇಳೆ ಬಂದು ಅಡ್ಡಿ ಪಡಿಸಿದ್ದು ಅಲ್ಲದೇ ಮೊಬೈಲ್‌ ಕಿತ್ತುಕೊಂಡು ಹಲ್ಲೆಯನ್ನ ಮಾಡಲಾಗಿದೆ.

ಈ ಸಂಬಂಧ ಆಮ್ ಆದ್ಮಿ ಪಕ್ಷದ ಸರ್ ಸಿವಿ ರಾಮನ್ ನಗರ ಅಭ್ಯರ್ಥಿ ಮೋಹನ್ ದಾಸರಿ ಪ್ರತಿಕ್ರಿಯಿಸಿದ್ದು, ಸಿವಿ ರಾಮನ್ ನಗರದ ಸುದ್ದಗುಂಟೆಪಾಳ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ & ಶಶಿಕುಮಾರ್ ಎನ್ನುವ ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮೋಹನ್ ಮತ್ತು ನಾಗರಾಜ್ ಸಂಗಡಿಗರು ಬಿಜೆಪ್ ಪಕ್ಷಕ್ಕೆ ಸೇರಿದರಾಗಿದ್ದು. ಪ್ರಚಾರ ಆರಂಭಕ್ಕೂ ಮೊದಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಹಾಗೆ ನಮ್ಮ ಕಾರ್ಯಕರ್ತರು ವಿಡಿಯೋ ತೆಗೆಯಲು ಹೋದಾಗ ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರಿಗೆ ದೂರು ನೀಡಿದ್ದಾರೆ.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

3 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

3 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

4 hours ago