BREAKING NEWS

ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ : ಪಕ್ಷದ ಕಾರ್ಯಕರ್ತರಿಂದ ದೂರು

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ ಶಾಸಕ ರಘು ಬೆಂಬಲಿಗರಿಂದ ಹಲ್ಲೆ ಮಾಡಲಾಗಿದೆ. ಕೊವಿಡ್ ಸಮಯದಲ್ಲಿ ನಿಮ್ಮ ಪಕ್ಷದಿಂದ ಏನ್ ಮಾಡಿದ್ದೀರಿ. ನಮಗೆ ನಮ್ಮ ಶಾಸಕರೇ ಸಾಕು. ನೀವು ಇಲ್ಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಪ್ರಚಾರದ ವೇಳೆ ಬಂದು ಅಡ್ಡಿ ಪಡಿಸಿದ್ದು ಅಲ್ಲದೇ ಮೊಬೈಲ್‌ ಕಿತ್ತುಕೊಂಡು ಹಲ್ಲೆಯನ್ನ ಮಾಡಲಾಗಿದೆ.

ಈ ಸಂಬಂಧ ಆಮ್ ಆದ್ಮಿ ಪಕ್ಷದ ಸರ್ ಸಿವಿ ರಾಮನ್ ನಗರ ಅಭ್ಯರ್ಥಿ ಮೋಹನ್ ದಾಸರಿ ಪ್ರತಿಕ್ರಿಯಿಸಿದ್ದು, ಸಿವಿ ರಾಮನ್ ನಗರದ ಸುದ್ದಗುಂಟೆಪಾಳ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ & ಶಶಿಕುಮಾರ್ ಎನ್ನುವ ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮೋಹನ್ ಮತ್ತು ನಾಗರಾಜ್ ಸಂಗಡಿಗರು ಬಿಜೆಪ್ ಪಕ್ಷಕ್ಕೆ ಸೇರಿದರಾಗಿದ್ದು. ಪ್ರಚಾರ ಆರಂಭಕ್ಕೂ ಮೊದಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಹಾಗೆ ನಮ್ಮ ಕಾರ್ಯಕರ್ತರು ವಿಡಿಯೋ ತೆಗೆಯಲು ಹೋದಾಗ ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರಿಗೆ ದೂರು ನೀಡಿದ್ದಾರೆ.

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago