ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ ಶಾಸಕ ರಘು ಬೆಂಬಲಿಗರಿಂದ ಹಲ್ಲೆ ಮಾಡಲಾಗಿದೆ. ಕೊವಿಡ್ ಸಮಯದಲ್ಲಿ ನಿಮ್ಮ ಪಕ್ಷದಿಂದ ಏನ್ ಮಾಡಿದ್ದೀರಿ. ನಮಗೆ ನಮ್ಮ ಶಾಸಕರೇ ಸಾಕು. ನೀವು ಇಲ್ಲಿಗೆ ಬರುವ ಅವಶ್ಯಕತೆ ಇಲ್ಲ ಎಂದು ಪ್ರಚಾರದ ವೇಳೆ ಬಂದು ಅಡ್ಡಿ ಪಡಿಸಿದ್ದು ಅಲ್ಲದೇ ಮೊಬೈಲ್ ಕಿತ್ತುಕೊಂಡು ಹಲ್ಲೆಯನ್ನ ಮಾಡಲಾಗಿದೆ.
ಈ ಸಂಬಂಧ ಆಮ್ ಆದ್ಮಿ ಪಕ್ಷದ ಸರ್ ಸಿವಿ ರಾಮನ್ ನಗರ ಅಭ್ಯರ್ಥಿ ಮೋಹನ್ ದಾಸರಿ ಪ್ರತಿಕ್ರಿಯಿಸಿದ್ದು, ಸಿವಿ ರಾಮನ್ ನಗರದ ಸುದ್ದಗುಂಟೆಪಾಳ್ಯದಲ್ಲಿ ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ & ಶಶಿಕುಮಾರ್ ಎನ್ನುವ ನಮ್ಮ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮೋಹನ್ ಮತ್ತು ನಾಗರಾಜ್ ಸಂಗಡಿಗರು ಬಿಜೆಪ್ ಪಕ್ಷಕ್ಕೆ ಸೇರಿದರಾಗಿದ್ದು. ಪ್ರಚಾರ ಆರಂಭಕ್ಕೂ ಮೊದಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಹಾಗೆ ನಮ್ಮ ಕಾರ್ಯಕರ್ತರು ವಿಡಿಯೋ ತೆಗೆಯಲು ಹೋದಾಗ ಮೊಬೈಲ್ ಕಿತ್ತುಕೊಂಡು ಹಲ್ಲೆ ಮಾಡಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರಿಗೆ ದೂರು ನೀಡಿದ್ದಾರೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…