ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್ ಅರ್ಜುನ(ಆನೆ)ನ ಸಾವಿನ ನೋವು ಮಾಸುವ ಮುನ್ನವೇ ದಸರಾ ಜಂಬೂಸವಾರಿ ಆನೆ ಪಡೆಯ ಅಶ್ವತ್ಥಾಮ ಎಂಬ ಆನೆ ಸಾವು ಆಘಾತವನ್ನುಂಟು ಮಾಡಿದೆ.
ನಾಗರಹೊಳೆಯ ಭೀಮನಕಟ್ಟೆ ಆನೆ ಕ್ಯಾಂಪ್ನಲ್ಲಿದ್ದ ಅಶ್ವತ್ಥಾಮ, ಆಹಾರವನ್ನು ಅರಸಿ ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸೋಲರ್ ತಂತಿಗಳ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅಶ್ವತ್ಥಾಮ ಆನೆ ಅದನ್ನು ತುಳಿದ ಪರಿಣಾಮ ಆನೆ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಶ್ವತ್ಥಾಮ ಬಂದಿದ್ದು ಇಲ್ಲಿಂದ : 2017ರಲ್ಲಿ ಹಾಸನದ ಸಕಲೇಶ್ಪುರದಲ್ಲಿ ಅಶ್ವತ್ಮಥಾಮನನ್ನು ಸೆರೆ ಹಿಡಿಯಲಾಗಿತ್ತು. ತನ್ನ ಶಾಂತ ಹಾಗೂ ತಾಳ್ಮೆ ಸ್ವಾಭಾವದಿಂದ ಮಾವುತರ ಅಚ್ಚುಮೆಚ್ಚಿನ ಆನೆಯಾಗಿತ್ತು. ಬಳಿಕ ಮೊಟ್ಟಮೊದಲಬಾರಿಗೆ 2021ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಿತ್ತು. ನಂತರ 2022ರಲ್ಲಿ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಮೂಲಕ ಜನಮೆಚ್ಚುಗೆ ಪಡೆಯುವಲ್ಲಿ ಅಶ್ವತ್ಥಾಮ ಯಶಸ್ವಿಯಾಯಿತು.
ಇದೀಗ ಅಶ್ವತ್ಥಾಮನ ಸಾವಿನ ಸುದ್ದಿ ತಿಳಿದು ಅರಣ್ಯಾ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರು ಮರುಕ ಪಟ್ಟಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…