ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್ ಅರ್ಜುನ(ಆನೆ)ನ ಸಾವಿನ ನೋವು ಮಾಸುವ ಮುನ್ನವೇ ದಸರಾ ಜಂಬೂಸವಾರಿ ಆನೆ ಪಡೆಯ ಅಶ್ವತ್ಥಾಮ ಎಂಬ ಆನೆ ಸಾವು ಆಘಾತವನ್ನುಂಟು ಮಾಡಿದೆ.
ನಾಗರಹೊಳೆಯ ಭೀಮನಕಟ್ಟೆ ಆನೆ ಕ್ಯಾಂಪ್ನಲ್ಲಿದ್ದ ಅಶ್ವತ್ಥಾಮ, ಆಹಾರವನ್ನು ಅರಸಿ ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸೋಲರ್ ತಂತಿಗಳ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅಶ್ವತ್ಥಾಮ ಆನೆ ಅದನ್ನು ತುಳಿದ ಪರಿಣಾಮ ಆನೆ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಶ್ವತ್ಥಾಮ ಬಂದಿದ್ದು ಇಲ್ಲಿಂದ : 2017ರಲ್ಲಿ ಹಾಸನದ ಸಕಲೇಶ್ಪುರದಲ್ಲಿ ಅಶ್ವತ್ಮಥಾಮನನ್ನು ಸೆರೆ ಹಿಡಿಯಲಾಗಿತ್ತು. ತನ್ನ ಶಾಂತ ಹಾಗೂ ತಾಳ್ಮೆ ಸ್ವಾಭಾವದಿಂದ ಮಾವುತರ ಅಚ್ಚುಮೆಚ್ಚಿನ ಆನೆಯಾಗಿತ್ತು. ಬಳಿಕ ಮೊಟ್ಟಮೊದಲಬಾರಿಗೆ 2021ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಿತ್ತು. ನಂತರ 2022ರಲ್ಲಿ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಮೂಲಕ ಜನಮೆಚ್ಚುಗೆ ಪಡೆಯುವಲ್ಲಿ ಅಶ್ವತ್ಥಾಮ ಯಶಸ್ವಿಯಾಯಿತು.
ಇದೀಗ ಅಶ್ವತ್ಥಾಮನ ಸಾವಿನ ಸುದ್ದಿ ತಿಳಿದು ಅರಣ್ಯಾ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರು ಮರುಕ ಪಟ್ಟಿದ್ದಾರೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…