ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್ ಅರ್ಜುನ(ಆನೆ)ನ ಸಾವಿನ ನೋವು ಮಾಸುವ ಮುನ್ನವೇ ದಸರಾ ಜಂಬೂಸವಾರಿ ಆನೆ ಪಡೆಯ ಅಶ್ವತ್ಥಾಮ ಎಂಬ ಆನೆ ಸಾವು ಆಘಾತವನ್ನುಂಟು ಮಾಡಿದೆ.
ನಾಗರಹೊಳೆಯ ಭೀಮನಕಟ್ಟೆ ಆನೆ ಕ್ಯಾಂಪ್ನಲ್ಲಿದ್ದ ಅಶ್ವತ್ಥಾಮ, ಆಹಾರವನ್ನು ಅರಸಿ ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸೋಲರ್ ತಂತಿಗಳ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅಶ್ವತ್ಥಾಮ ಆನೆ ಅದನ್ನು ತುಳಿದ ಪರಿಣಾಮ ಆನೆ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಶ್ವತ್ಥಾಮ ಬಂದಿದ್ದು ಇಲ್ಲಿಂದ : 2017ರಲ್ಲಿ ಹಾಸನದ ಸಕಲೇಶ್ಪುರದಲ್ಲಿ ಅಶ್ವತ್ಮಥಾಮನನ್ನು ಸೆರೆ ಹಿಡಿಯಲಾಗಿತ್ತು. ತನ್ನ ಶಾಂತ ಹಾಗೂ ತಾಳ್ಮೆ ಸ್ವಾಭಾವದಿಂದ ಮಾವುತರ ಅಚ್ಚುಮೆಚ್ಚಿನ ಆನೆಯಾಗಿತ್ತು. ಬಳಿಕ ಮೊಟ್ಟಮೊದಲಬಾರಿಗೆ 2021ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಿತ್ತು. ನಂತರ 2022ರಲ್ಲಿ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಮೂಲಕ ಜನಮೆಚ್ಚುಗೆ ಪಡೆಯುವಲ್ಲಿ ಅಶ್ವತ್ಥಾಮ ಯಶಸ್ವಿಯಾಯಿತು.
ಇದೀಗ ಅಶ್ವತ್ಥಾಮನ ಸಾವಿನ ಸುದ್ದಿ ತಿಳಿದು ಅರಣ್ಯಾ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರು ಮರುಕ ಪಟ್ಟಿದ್ದಾರೆ.
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…
ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…
ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…