ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್ ಅರ್ಜುನ(ಆನೆ)ನ ಸಾವಿನ ನೋವು ಮಾಸುವ ಮುನ್ನವೇ ದಸರಾ ಜಂಬೂಸವಾರಿ ಆನೆ ಪಡೆಯ ಅಶ್ವತ್ಥಾಮ ಎಂಬ ಆನೆ ಸಾವು ಆಘಾತವನ್ನುಂಟು ಮಾಡಿದೆ.
ನಾಗರಹೊಳೆಯ ಭೀಮನಕಟ್ಟೆ ಆನೆ ಕ್ಯಾಂಪ್ನಲ್ಲಿದ್ದ ಅಶ್ವತ್ಥಾಮ, ಆಹಾರವನ್ನು ಅರಸಿ ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸೋಲರ್ ತಂತಿಗಳ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅಶ್ವತ್ಥಾಮ ಆನೆ ಅದನ್ನು ತುಳಿದ ಪರಿಣಾಮ ಆನೆ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಶ್ವತ್ಥಾಮ ಬಂದಿದ್ದು ಇಲ್ಲಿಂದ : 2017ರಲ್ಲಿ ಹಾಸನದ ಸಕಲೇಶ್ಪುರದಲ್ಲಿ ಅಶ್ವತ್ಮಥಾಮನನ್ನು ಸೆರೆ ಹಿಡಿಯಲಾಗಿತ್ತು. ತನ್ನ ಶಾಂತ ಹಾಗೂ ತಾಳ್ಮೆ ಸ್ವಾಭಾವದಿಂದ ಮಾವುತರ ಅಚ್ಚುಮೆಚ್ಚಿನ ಆನೆಯಾಗಿತ್ತು. ಬಳಿಕ ಮೊಟ್ಟಮೊದಲಬಾರಿಗೆ 2021ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಿತ್ತು. ನಂತರ 2022ರಲ್ಲಿ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಮೂಲಕ ಜನಮೆಚ್ಚುಗೆ ಪಡೆಯುವಲ್ಲಿ ಅಶ್ವತ್ಥಾಮ ಯಶಸ್ವಿಯಾಯಿತು.
ಇದೀಗ ಅಶ್ವತ್ಥಾಮನ ಸಾವಿನ ಸುದ್ದಿ ತಿಳಿದು ಅರಣ್ಯಾ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರು ಮರುಕ ಪಟ್ಟಿದ್ದಾರೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…