ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ.
ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್ ಕರೆತರಲಾಗಿತ್ತು. ಸಿಸಿಬಿ ಪೊಲೀಸರು ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.
ಆರೋಪಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…