ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ.
ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್ ಕರೆತರಲಾಗಿತ್ತು. ಸಿಸಿಬಿ ಪೊಲೀಸರು ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.
ಆರೋಪಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…