BREAKING NEWS

ಮುಸ್ಲಿಮರ ಮೀಸಲಾತಿ ರದ್ದು : ಪ್ರತಿಕ್ರಿಯೆ ನೀಡಲು ಕಾಲಾವಕಾಶಕ್ಕಾಗಿ ಸುಪ್ರೀಂಕೋರ್ಟ್‍ಗೆ ಕರ್ನಾಟಕ ಸರ್ಕಾರದ ಮನವಿ

ನವದೆಹಲಿ – ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಪಡಿಸಿರುವ ಕುರಿತು ಪ್ರತಿಕ್ರಿಯಿಸಲು ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಮಾಡಿದೆ.
ಕರ್ನಾಟಕ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‍ನಲ್ಲಿ ವಾದ ಮಾಡುತ್ತಿರುವ ಹಿರಿಯ ವಕೀಲ ತುಷಾರ್ ಮೆಹ್ತಾ ಅವರು ಬೇರೊಂದು ಪ್ರಕರಣದ ಅರ್ಜಿ ವಿಚಾರಣೆಯಲ್ಲಿ ಭಾಗಿಯಾಗಬೇಕಿರುವುದರಿಂದ ಅರ್ಜಿಯನ್ನು ಮುಂದೂಡಬೇಕೆಂದು ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.
ಮೆಹ್ತಾ ಅವರು ಸಲಿಂಗ ವಿವಾಹದ ಬಗ್ಗೆ ಸಂವಿಧಾನ ಪೀಠದ ಮುಂದೆ ವಾದಿಸಬೇಕಾಗಿದೆ. ಆದ್ದರಿಂದ ವಾರಾಂತ್ಯದಲ್ಲಿ ಮೀಸಲಾತಿ ಕೋಟಾ ವಿಷಯದ ಬಗ್ಗೆ ಉತ್ತರ ಸಲ್ಲಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಮೀಸಲಾತಿ ರದ್ದತಿಯನ್ನು ಪ್ರಶ್ನಿಸಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ವಿರೋಧ ವ್ಯಕ್ತಪಡಿಸಲಿಲ್ಲ. ಆದರೆ ಏಪ್ರಿಲ್ 25ಕ್ಕಿಂತ ಮೊದಲು ವಿಚಾರಣೆ ನಡೆಸಬಹುದು ಎಂದು ಹೇಳಿದರು.
ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರದ್ದು ವಿಚಾರವಾಗಿ ಸುಪ್ರೀಂಕೋರ್ಟ್‍ನಲ್ಲಿ ರಾಜ್ಯ ತನ್ನ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿರುವುದರಿಂದ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಏ.25ಕ್ಕೆ ಮುಂದೂಡಿದೆ.
ಒಕ್ಕಲಿಗರು ಮತ್ತು ಲಿಂಗಾಯತರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಕೋಟಾ ತಲಾ ಶೇ.2ರಷ್ಟು ಹೆಚ್ಚಿಸಲು ಮುಸ್ಲಿಮರ ಶೇ.4ರಷ್ಟು ಮೀಸಲಾತಿ ರದ್ದು ಮಾಡಿರುವ ಕರ್ನಾಟಕ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ಸದಸ್ಯರು ಅರ್ಜಿಗಳು ಸಲ್ಲಿಸಿದ್ದಾರೆ.
ಈ ಹಿಂದೆ ಏ.13ರಂದು ಅರ್ಜಿ ವಿಚಾರಣೆಗಳ ನಡೆಸಿದ್ದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ನೇತೃತ್ವದ ನ್ಯಾಯ ಪೀಠವು ಏಪ್ರಿಲ್ 18ರೊಳಗೆ ತನ್ನ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಸರ್ಕಾರಕ್ಕೆ ಸೂಚಿಸಿತ್ತು.
ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಿದೆ. ಈ ವೇಳೆ ರಾಜ್ಯ ಸರ್ಕಾರ ತನ್ನ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದೆ.
ಇದೇ ವೇಳೆ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಶಿಕ್ಷಣ ಸಂಸ್ಥೆಗಳ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಯಾವುದೇ ಕೋಟಾ ಪ್ರಯೋಜನಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಏಪ್ರಿಲ್ 13ರಂದು ನೀಡಿದ್ದ ಭರವಸೆಯನ್ನು ಏ.25ರವರೆಗೆ ಮುಂದುವರಿಸಲಾಗುವುದು ಎಂದೂ ಹೇಳಿತು.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಕೆಲ ವಾರಗಳ ಮುನ್ನ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಧರಿಸಿತ್ತು.
ಇದೇ ವೇಳೆ ರಾಜ್ಯ ಸರ್ಕಾರವು ಮೀಸಲಾತಿಗಾಗಿ ಎರಡು ಹೊಸ ವರ್ಗಗಳನ್ನು ಘೋಷಿಸಿತ್ತು. ಮುಸ್ಲಿಮರ ಶೇ.4ರಷ್ಟು ಮೀಸಲಾತಿ ಕೋಟಾವನ್ನು ಪ್ರಬಲ ಜನಸಂಖ್ಯೆ ಹಾಗೂ ರಾಜಕೀಯವಾಗಿ ಪ್ರಭಾವಿ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ನಡುವೆ ತಲಾ ಶೇ.2ರಷ್ಟು ವಿಂಗಡಿಸಿ ಹಂಚಿಕೆ ಮಾಡಿತ್ತು. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗಗಳ ಅಡಿಗೆ ಸೇರಿಸಿ ಆದೇಶಿಸಲಾಗಿತ್ತು.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

4 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

4 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

7 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

7 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

7 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

7 hours ago