BREAKING NEWS

ಮುಸ್ಲಿಂ ಮೀಸಲು ರದ್ದು: ಇನ್ನೊಂದು ವಾರ ಜಾರಿ ಇಲ್ಲ; ರಾಜ್ಯ ಸರ್ಕಾರ

ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಇನ್ನೂ ಒಂದು ವಾರದವರೆಗೆ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಂಗಳವಾರ ತಿಳಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ‘ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿದೆ’ ಎಂದರು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌, ‘ರಾಜ್ಯ ಸರ್ಕಾರವು ವಾರದೊಳಗೆ ಪ್ರತಿಕ್ರಿಯೆ ನೀಡಬೇಕು. ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಬಹುದು’ ಎಂದು ಸಲಹೆ ನೀಡಿದರು. ಇದಕ್ಕೆ ಒಪ್ಪಿದ ಪೀಠವು ವಿಚಾರಣೆಯನ್ನು ಏಪ್ರಿಲ್‌ 25ಕ್ಕೆ ಮುಂದೂಡಿತು. ಪ್ರತಿಕ್ರಿಯೆ ನೀಡಲು ಏಪ್ರಿಲ್‌ 17ರವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಕಳೆದ ವಾರ ಕೋರಿತ್ತು.

ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಕರ್ನಾಟಕ ಸರ್ಕಾರವು ಮಾರ್ಚ್‌ 27ರಂದು ಆದೇಶ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ಎಲ್‌. ಗುಲಾಮ್ ರಸೂಲ್‌ ಮತ್ತು ಇತರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಪೀಠವು, ‘ರಾಜ್ಯ ಸರ್ಕಾರದ ನಿರ್ಧಾರವು ದೋಷಪೂರಿತ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಕಳೆದ ಗುರುವಾರ ಹೇಳಿತ್ತು.

‘ಮಾರ್ಚ್‌ 27ರ ಆದೇಶದ ಆಧಾರದ ಮೇಲೆ ಯಾವುದೇ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶಾತಿ ನೀಡುವುದಿಲ್ಲ ಮತ್ತು ಯಾವುದೇ ಉದ್ಯೋಗಗಳಿಗೆ ನೇಮಕಾತಿ ಮಾಡುವುದಿಲ್ಲ’ ಎಂದು ಸರ್ಕಾರ ಭರವಸೆ ನೀಡಿತ್ತು.

ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ಲಿಂಗಾಯತರಿಗೆ ಹಾಗೂ ಒಕ್ಕಲಿಗರಿಗೆ ತಲಾ ಶೇ 2ರಷ್ಟು ಹಂಚುವ ನಿರ್ಣಯವನ್ನು ಕರ್ನಾಟಕ ಸರ್ಕಾರ ಮಾಡಿತ್ತು. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ತೆಗೆದುಕೊಂಡಿತ್ತು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago