ತಿರುವನಂತಪುರಂ: ಸಹೋದರನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಹೇಳಿದೆ.
ಅಪ್ರಾಪ್ತ ಬಾಲಕಿಯ ತಂದೆ ಆಕೆಯ ಗರ್ಭಪಾತಕ್ಕೆ ಅವಕಾಶ ಮಾಡಿ ಕೊಡಿಸುವಂತೆ ಕೋರಿದ್ದರು. ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿಯನ್ನು ಆಧರಿಸಿ ನ್ಯಾಯಮೂರ್ತಿ ಜಿಯಾದ್ ರಹಮಾನ್ ಅವರ ಏಕ ಪೀಠ ಈ ನಿರ್ಧಾರ ಕೈಗೊಂಡಿದೆ.
ವೈದ್ಯಕೀಯ ವರದಿಯನ್ನು ಪರಿಶೀಲಿಸಿದಾಗ, ಮಗುವು ದೈಹಿಕವಾಗಿ ಮತ್ತು ಮಾನಸಿಕವಾಗಿ ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯಕ್ಕೆ ಯೋಗ್ಯವಾಗಿದೆ ಎಂಬುದು ಸ್ಪಷ್ಟವಾಗಿದೆ. ಗರ್ಭಧಾರಣೆಯ ಮುಂದುವರಿಕೆ ಬಾಲಕಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಪರಿಣಾಮವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಕೋರ್ಟ್ ಹೇಳಿದೆ.
ವೈದ್ಯಕೀಯ ಮಂಡಳಿ ಪ್ರಕಾರ ಬಾಲಕಿ ಜೀವಂತ ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇತ್ತು. ಅಂತಹ ಸಂದರ್ಭಗಳಲ್ಲಿ, ಅರ್ಜಿದಾರರ ಮಗಳ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯವನ್ನು ಅನುಮತಿಸಲು ನಾನು ಒಲವು ತೋರುತ್ತೇನೆ” ಎಂದು ನ್ಯಾಯಾಧೀಶರು ಮೇ 19 ರ ತಮ್ಮ ಆದೇಶದಲ್ಲಿ ಹೇಳಿದ್ದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…