BREAKING NEWS

ಅಪ್ರಾಪ್ತ ವಯಸ್ಕಳ ಗರ್ಭಪಾತಕ್ಕೆ ಅನುಮತಿ: ಕೇರಳ ಹೈಕೋರ್ಟ್‌

ತಿರುವನಂತಪುರಂ: ಸಹೋದರನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಹೇಳಿದೆ.

ಅಪ್ರಾಪ್ತ ಬಾಲಕಿಯ ತಂದೆ ಆಕೆಯ ಗರ್ಭಪಾತಕ್ಕೆ ಅವಕಾಶ ಮಾಡಿ ಕೊಡಿಸುವಂತೆ ಕೋರಿದ್ದರು. ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿಯನ್ನು ಆಧರಿಸಿ ನ್ಯಾಯಮೂರ್ತಿ ಜಿಯಾದ್ ರಹಮಾನ್ ಅವರ ಏಕ ಪೀಠ ಈ ನಿರ್ಧಾರ ಕೈಗೊಂಡಿದೆ.

ವೈದ್ಯಕೀಯ ವರದಿಯನ್ನು ಪರಿಶೀಲಿಸಿದಾಗ, ಮಗುವು ದೈಹಿಕವಾಗಿ ಮತ್ತು ಮಾನಸಿಕವಾಗಿ ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯಕ್ಕೆ ಯೋಗ್ಯವಾಗಿದೆ ಎಂಬುದು ಸ್ಪಷ್ಟವಾಗಿದೆ. ಗರ್ಭಧಾರಣೆಯ ಮುಂದುವರಿಕೆ ಬಾಲಕಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಪರಿಣಾಮವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಕೋರ್ಟ್ ಹೇಳಿದೆ.

ವೈದ್ಯಕೀಯ ಮಂಡಳಿ ಪ್ರಕಾರ ಬಾಲಕಿ ಜೀವಂತ ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇತ್ತು. ಅಂತಹ ಸಂದರ್ಭಗಳಲ್ಲಿ, ಅರ್ಜಿದಾರರ ಮಗಳ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯವನ್ನು ಅನುಮತಿಸಲು ನಾನು ಒಲವು ತೋರುತ್ತೇನೆ” ಎಂದು ನ್ಯಾಯಾಧೀಶರು ಮೇ 19 ರ ತಮ್ಮ ಆದೇಶದಲ್ಲಿ ಹೇಳಿದ್ದರು.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

9 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

9 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

11 hours ago