ತಿರುವನಂತಪುರಂ: ಸಹೋದರನಿಂದಲೇ ಗರ್ಭಿಣಿಯಾಗಿದ್ದ ಅಪ್ರಾಪ್ತ ವಯಸ್ಕ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಕೇರಳ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ ವಿವಿಧ ಸಾಮಾಜಿಕ ಮತ್ತು ವೈದ್ಯಕೀಯ ತೊಡಕುಗಳು ಉದ್ಭವಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಹೇಳಿದೆ.
ಅಪ್ರಾಪ್ತ ಬಾಲಕಿಯ ತಂದೆ ಆಕೆಯ ಗರ್ಭಪಾತಕ್ಕೆ ಅವಕಾಶ ಮಾಡಿ ಕೊಡಿಸುವಂತೆ ಕೋರಿದ್ದರು. ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿಯನ್ನು ಆಧರಿಸಿ ನ್ಯಾಯಮೂರ್ತಿ ಜಿಯಾದ್ ರಹಮಾನ್ ಅವರ ಏಕ ಪೀಠ ಈ ನಿರ್ಧಾರ ಕೈಗೊಂಡಿದೆ.
ವೈದ್ಯಕೀಯ ವರದಿಯನ್ನು ಪರಿಶೀಲಿಸಿದಾಗ, ಮಗುವು ದೈಹಿಕವಾಗಿ ಮತ್ತು ಮಾನಸಿಕವಾಗಿ ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯಕ್ಕೆ ಯೋಗ್ಯವಾಗಿದೆ ಎಂಬುದು ಸ್ಪಷ್ಟವಾಗಿದೆ. ಗರ್ಭಧಾರಣೆಯ ಮುಂದುವರಿಕೆ ಬಾಲಕಿಯ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಪರಿಣಾಮವನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಕೋರ್ಟ್ ಹೇಳಿದೆ.
ವೈದ್ಯಕೀಯ ಮಂಡಳಿ ಪ್ರಕಾರ ಬಾಲಕಿ ಜೀವಂತ ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇತ್ತು. ಅಂತಹ ಸಂದರ್ಭಗಳಲ್ಲಿ, ಅರ್ಜಿದಾರರ ಮಗಳ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯವನ್ನು ಅನುಮತಿಸಲು ನಾನು ಒಲವು ತೋರುತ್ತೇನೆ” ಎಂದು ನ್ಯಾಯಾಧೀಶರು ಮೇ 19 ರ ತಮ್ಮ ಆದೇಶದಲ್ಲಿ ಹೇಳಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…