ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.
ಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.
“ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ” ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.
“ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ.
ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…