ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.
ಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.
“ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ” ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.
“ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ.
ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್ನ್ನು ಪ್ರತಿನಿಧಿಸುವ ಪಾಲಿಕೆ…
ಮೈಸೂರಿನ ಎಲ್ಲ ವಾರ್ಡ್ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ…
ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ…
ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ…