ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.
ಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.
“ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ” ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.
“ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ.
ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…