BREAKING NEWS

ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಚೇರ್ ಕಾರ್, ಎಕ್ಸಿಕ್ಯೂಟಿವ್ ಟಿಕೆಟ್ ದರ ಶೇ. 25 ರವರೆಗೆ ಕಡಿತ

ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್‌ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.

ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.

ಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.

“ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್‌ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ” ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.

“ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ.

ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago