ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.
ಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.
“ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ” ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.
“ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ.
ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…