ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ಈ ದರಗಳು ಸಹ ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೆ ಅವಲಂಬಿತವಾಗಿರುತ್ತದೆ.
ಭ್ಯವಿರುವ ಸ್ಥಾನಗಳ ಬಳಕೆಯನ್ನು ಉತ್ತಮಗೊಳಿಸುವ ದೃಷ್ಟಿಯಿಂದ, ರೈಲ್ವೆ ಸಚಿವಾಲಯವು ರೈಲ್ವೆ ವಲಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರಿಗೆ ಎಸಿ ಚೇರ್ ಕಾರ್ ರೈಲುಗಳಲ್ಲಿ ರಿಯಾಯಿತಿ ದರದ ಯೋಜನೆಗಳನ್ನು ಪರಿಚಯಿಸುವ ಅಧಿಕಾರ ನೀಡಲು ನಿರ್ಧರಿಸಿದೆ.
“ಈ ಯೋಜನೆಯು ಅನುಭೂತಿ ಮತ್ತು ವಿಸ್ಟಾಡೋಮ್ ಕೋಚ್ಗಳು ಸೇರಿದಂತೆ ಎಸಿ ಆಸನ ಸೌಕರ್ಯಗಳನ್ನು ಹೊಂದಿರುವ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಗಳಿಗೆ ಅನ್ವಯಿಸುತ್ತದೆ” ಎಂದು ರೈಲ್ವೆ ಮಂಡಳಿಯ ಆದೇಶದಲ್ಲಿ ತಿಳಿಸಿದೆ.
“ರಿಯಾಯಿತಿಯೂ ಮೂಲ ದರದಲ್ಲಿ ಗರಿಷ್ಠ ಶೇ. 25 ವರೆಗೆ ಇರುತ್ತದೆ. ರಿಸರ್ವೆಷನ್ ಶುಲ್ಕ, ಸೂಪರ್ ಫಾಸ್ಟ್ ಸರ್ಚಾರ್ಜ್, ಜಿಎಸ್ಟಿ, ಇತ್ಯಾದಿಗಳಂತಹ ಇತರ ಶುಲ್ಕಗಳನ್ನು ಪ್ರತ್ಯೇಕವಾಗಿ ವಿಧಿಸಲಾಗುತ್ತದೆ.
ಆಕ್ಯುಪೆನ್ಸೀ ಶೇಕಡಾ 50 ಕ್ಕಿಂತ ಕಡಿಮೆಯಿದ್ದರೆ ಯಾವುದೇ ರೈಲು ಅಥವಾ ಎಲ್ಲಾ ವರ್ಗಗಳಲ್ಲಿ ರಿಯಾಯಿತಿಯನ್ನು ಒದಗಿಸಬಹುದು ಎಂದು ರೈಲ್ವೆ ಮಂಡಳಿ ಸ್ಪಷ್ಟವಾಗಿ ಹೇಳಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…