ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.
ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್ನ ಮೂರು ಜಿಲ್ಲೆಗಳಾದ ಧನ್ಬಾದ್, ಬೊಕಾರೋ ಮತ್ತು ಸಿಂಗ್ಭೂಮ್ಗೆ ಸಂಚಾರ ಕಲ್ಪಿಸಲಾಗಿತ್ತು.
ಪುರುಲಿಯಾ ಎಕ್ಸ್ಪ್ರೆಸ್ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…