BREAKING NEWS

ಗೂಡ್ಸ್ ರೈಲುಗಳ ನಡುವೆ ಅಪಘಾತ : ಹಳಿ ತಪ್ಪಿದ 12 ಬೋಗಿಗಳು

ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.

ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್‌ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್‌ನ ಮೂರು ಜಿಲ್ಲೆಗಳಾದ ಧನ್‌ಬಾದ್, ಬೊಕಾರೋ ಮತ್ತು ಸಿಂಗ್‌ಭೂಮ್‌ಗೆ ಸಂಚಾರ ಕಲ್ಪಿಸಲಾಗಿತ್ತು.

ಪುರುಲಿಯಾ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್‌ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ.

ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

lokesh

Recent Posts

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

3 mins ago

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

30 mins ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

43 mins ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

51 mins ago

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…

1 hour ago

ತಂದೆ ಕೆಸಿಆರ್‌ಗೆ ಸೆಡ್ಡು: ಹೊಸ ಟಿಆರ್‌ಎಸ್‌ ಪಕ್ಷ ಸ್ಥಾಪಿಸಿದ ಕವಿತಾ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…

1 hour ago