ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.
ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್ನ ಮೂರು ಜಿಲ್ಲೆಗಳಾದ ಧನ್ಬಾದ್, ಬೊಕಾರೋ ಮತ್ತು ಸಿಂಗ್ಭೂಮ್ಗೆ ಸಂಚಾರ ಕಲ್ಪಿಸಲಾಗಿತ್ತು.
ಪುರುಲಿಯಾ ಎಕ್ಸ್ಪ್ರೆಸ್ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…