BREAKING NEWS

2‌ ವರ್ಷಗಳಿಂದ ನಿಷ್ಕ್ರಿಯಗೊಂಡಿರುವ ಖಾತೆಗಳನ್ನು ಅಳಿಸಲಾಗುವುದು: ಗೂಗಲ್

ನ್ಯೂಯಾರ್ಕ್‌ : ಗೂಗಲ್‌ ಸಂಸ್ಥೆ ತನ್ನ ಹೊಸ ಇನ್‌ಆಕ್ವಿಟಿವಿಟಿ ನೀತಿ (ನಿಷ್ಕ್ರಿಯತೆ ನೀತಿ) ಯನ್ನು ಆಗಸ್ಟ್‌ 4ರಂದು ಜಾರಿಗೊಳಿಸಿದೆ. ಈ ನೀತಿಯನ್ವಯ ಗೂಗಲ್‌ ತನ್ನ ಬಳಕೆದಾರರಿಗೆ ಈ ವರ್ಷದ ಡಿಸೆಂಬರ್‌ 1ರ ಗಡುವಿನ ನೆನಪು ಮಾಡಿದ್ದು, ಸಕ್ರಿಯವಾಗಿಲ್ಲದೇ ಇರುವ ಖಾತೆಯನ್ನು ಅದು ಅಳಿಸಲು ಪ್ರಾರಂಭಿಸಲಿದೆ.

ಗೂಗಲ್‌ ಖಾತೆ ಬಳಕೆದಾರರಿಗೆ ನಿಷ್ಕ್ರಿಯ ಅವಧಿಯನ್ನು ಎರಡು ವರ್ಷಗಳಿಗೆ ಪರಿಷ್ಕರಿಸಲಾಗಿದ್ದು ಇದು ಜಿಮೇಲ್‌ ಸಹಿತ ಎಲ್ಲಾ ಗೂಗಲ್‌ ಉತ್ಪನ್ನ ಮತ್ತು ಸೇವೆಗಳ ಬಳಕೆದಾರರಿಗೆ ಅನ್ವಯವಾಗುತ್ತದೆ.

ಒಬ್ಬ ಬಳಕೆದಾರ ಎರಡು ವರ್ಷ ಅವಧಿಯಲ್ಲಿ ಒಮ್ಮೆಯೂ ತನ್ನ ಖಾತೆಗೆ ಲಾಗಿನ್‌ ಮಾಡಿಲ್ಲದೇ ಇದ್ದರೆ ಖಾತೆ ನಿಷ್ಕ್ರಿಯವೆಂದು ಪರಿಗಣಿಸಲಾಗುವುದು ಎಂದು ಗೂಗಲ್‌ ಹೇಳಿದೆ.

ಡಿಸೆಂಬರ್‌ 1, 2023ರಿಂದ ಯಾವುದೇ ನಿಷ್ಕ್ರಿಯ ಖಾತೆ ಮತ್ತು ಅದರಲ್ಲಿರುವ ವಿಷಯ ಅಳಿಸುವಿಕೆಗೆ ಅರ್ಹವಾಗುತ್ತವೆ ಎಂದು ಗೂಗಲ್‌ ಹೇಳಿದೆಯಲ್ಲದೆ ಒಮ್ಮೆ ಅಳಿಸಿದ ನಂತರ ಅದೇ ಜಿಮೇಲ್‌ ವಿಳಾಸವನ್ನು ಹೊಸ ಖಾತೆ ರಚಿಸಲು ಬಳಸುವ ಹಾಗಿಲ್ಲ ಎಂದು ಸಂಸ್ಥೆ ಹೇಳಿದೆ.

ಖಾತೆ ನಿಷ್ಕ್ರಿಯವಾಗಿದ್ದರೆ ಸಂಬಂಧಿತ ಬಳಕೆದಾರರಿಗೆ ಹಲವಾರು ಜ್ಞಾಪನೆ ಇಮೇಲ್‌ಗಳನ್ನು ಆ ಖಾತೆಗೆ ಮತ್ತು ರಿಕವರಿ ಇಮೇಲ್‌ಗಳನ್ನು ಒದಗಿಸಲಾಗಿದ್ದರೆ ಅವುಗಳಿಗೂ ಕಳಿಸಲಾಗುವುದು, ನಂತರವಷ್ಟೇ ಖಾತೆ ಅಳಿಸಲಾಗುವುದು, ಖಾತೆಯನ್ನು ಅಳಿಸುವ ಎಂಟು ತಿಂಗಳಿಗೆ ಮುಂಚಿತವಾಗಿ ಜ್ಞಾಪನೆ ಇಮೇಲ್‌ಗಳನ್ನು ಕಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ನಿಷ್ಕ್ರಿಯತೆ ನೀತಿಯಿಂದ ಯುಟ್ಯೂಬ್‌ ಚಾನಲ್‌ ಖಾತೆಗಳು, ವೀಡಿಯೋಗಳು ಅಥವಾ ಕಾಮೆಂಟ್‌ಗಳನ್ನು ಹೊಂದಿರುವ ಖಾತೆಗಳಿಗೆ ವಿನಾಯಿತಿಯಿದೆ ಎಂದು ಗೂಗಲ್‌ ಹೇಳಿದೆ. ಲೋಡ್‌ ಮಾಡಿದ ಗಿಫ್ಟ್‌ ಕಾರ್ಡ್‌ ಹೊಂದಿದ ಖಾತೆ ಅಥವಾ ಪ್ರಕಟಿತ ಅಪ್ಲಿಕೇಶನ್‌ ಹೊಂದಿರುವ ಖಾತೆಗೂ ವಿನಾಯಿತಿಯಿದೆ.

ಖಾತೆ ಹೇಗೆ ಸಕ್ರಿಯವಾಗಿರಿಸುವುದು?

► ಇಮೇಲ್‌ ಓದುವುದು ಅಥವಾ ಕಳಿಸುವುದು.

► ಗೂಗಲ್‌ ಡ್ರೈವ್‌ ಬಳಸುವುದು

► ಯುಟ್ಯೂಬ್‌ ವೀಡಿಯೋ ವೀಕ್ಷಿಸುವುದು

► ಫೋಟೋ ಶೇರ್‌ ಮಾಡುವುದು

► ಆಪ್‌ ಡೌನ್‌ಲೋಡ್‌ ಮಾಡುವುದು

► ಗೂಗಲ್‌ ಸರ್ಚ್‌ ಬಳಸುವುದು

► ಮೂರನೇ ಪಕ್ಷದ ಆ್ಯಪ್ ಅಥವಾ ಸೇವೆಗೆ ಸೈನ್‌ ಇನ್‌ ಮಾಡಲು ಗೂಗಲ್‌ ಮೂಲಕ ಸೈನ್‌ ಇನ್‌ ಮಾಡುವುದು

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

1 hour ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

1 hour ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

1 hour ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

2 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

2 hours ago