BREAKING NEWS

ಕೋಮು ಗಲಭೆಗೆ ಪ್ರಚೋದನೆ ಆರೋಪ : ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕಾಂಗ್ರೆಸ್ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಗುರುವಾರ ಹೈಗ್ರೌಂಡ್ ಪೊಲೀಸ್ ಠಾಣೆಗೆ ತೆರಳಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಅವರು ಪೊಲೀಸರಿಗೆ ಗುರುವಾರ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದರು.
ಬಳಿಕ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ದೂರು ದಾಖಲು ಮಾಡಿದ್ದೇವೆ. ಅಮಿತ್ ಶಾ ಅವರು ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚಾರದ ವೇಳೆ ಸುಳ್ಳು ಹೇಳಿಕೆಗಳನ್ನೂ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಆಗುತ್ತದೆ ಎಂದು ಪ್ರಚಾರದ ವೇಳೆ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಈಗ ಬಿಜೆಪಿ ಸರ್ಕಾರ ಸೋಲಿನ ಭಯದಲ್ಲಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ರಾಜ್ಯ ಶಾಂತಿಯ ತೋಟ. ಕಾಂಗ್ರೆಸ್ ಬಂದ್ರೆ ಕೋಮು ಗಲಭೆ ಆಗುತ್ತೆ ಅಂತ ಹೇಳಿಕೆ ಕೊಟ್ಟಿದ್ದಾರೆ, ಇದರ ಅರ್ಥ ಏನು? ಕಾಂಗ್ರೆಸ್ ಗೆ ವೋಟ್ ಕೊಡ್ಬೇಡಿ ಅಂತ ಮತದಾರನ್ನ ಹೆದರಿಸುತ್ತಿದ್ದಾರೆ. ಅವರು ರಾಷ್ಟ್ರದ ಹೋಂ ಮಿನಿಸ್ಟರ್ ಆಗಿರುವವರು. ಜನರ ಮೇಲೆ ಪ್ರಭಾವ ಬೀರುವ ಅಮಿತ್ ಶಾ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

lokesh

Recent Posts

ಗ್ರಾಮ ಪಂಚಾಯ್ತಿ ಚುನಾವಣೆ : ಸಿದ್ಧತೆಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸರ್ಕಾರ

ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…

25 mins ago

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದು ಗಾಂಧಿಜೀ : ಸಿಎಂ

ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…

36 mins ago

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

2 hours ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

3 hours ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

3 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

4 hours ago