BREAKING NEWS

ಸಂಸತ್‌ ಭದ್ರತಾ ಲೋಪ; 4 ಡಿಗ್ರಿ ಹೊಂದಿದ್ದ ನೀಲಮ್‌ ಅಜಾದ್‌; ಈ ಹಿಂದೆಯೂ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ರು!

ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಪೈಕಿ ನೀಲಮ್‌ ತಾಯಿ ನೀಡಿರುವ ಮಾಹಿತಿ ಪ್ರಕಾರ ನೀಲಮ್‌ ನಿರುದ್ಯೋಗದ ಬಗ್ಗೆ ಚಿಂತಿತಳಾಗಿದ್ದಳು. ಒಳ್ಳೆಯ ವಿದ್ಯಾಭ್ಯಾಸ ಪಡೆದರೂ ಕೆಲಸ ಸಿಗುತ್ತಿಲ್ಲ, ಇದಕ್ಕಿಂತ ಸಾಯುವುದೇ ಒಳ್ಳೆಯದು ಎಂದು ತನ್ನ ತಾಯಿಯ ಬಳಿ ನೀಲಮ್‌ ಹೇಳಿದ್ದಳಂತೆ. ಇನ್ನು ಹರಿಯಾಣದ ಜಿಂದ್‌ ಮೂಲದ ನೀಲಮ್‌ 30 ವರ್ಷ ವಯಸ್ಸಿನವಳಾಗಿದ್ದು ಬಿಎ, ಎಂಎ, ಬಿಎಡ್‌, ಎಂಎಡ್‌ ಹಾಗೂ ನೀಟ್‌ ಪದವಿಗಳನ್ನು ಹೊಂದಿದ್ದಾಳೆ. ಇದಾದ ಬಳಿಕ ಹಲವಾರು ದಿನಗಳ ಕಾಲ ನಿರುದ್ಯೋಗಿಯಾಗಿದ್ದ ನೀಲಮ್ ಹರಿಯಾಣ ನಾಗರೀಕ ಸೇವೆಗಳ ಪರೀಕ್ಷೆಗೂ ಸಹ ಸಿದ್ಧತೆಪಡಿಸಿಕೊಳ್ಳುತ್ತಿದ್ದಳಂತೆ.

ಈಕೆಯ ಕುರಿತು ಮಾತನಾಡಿರುವ ಕುಟುಂಬಸ್ಥರು ಈಕೆಗೆ ಯಾವುದೇ ಸಂಘಟನೆಗಳ ಜತೆ ಹಾಗೂ ಪಕ್ಷಗಳ ಜತೆ ನಂಟಿಲ್ಲ ಎಂದು ಹೇಳಿದ್ದು ಈ ಹಿಂದೆ 2020-2021ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಳು ಹಾಗೂ ಇದೇ ವರ್ಷ ನಡೆದಿದ್ದ ರೆಸ್ಲರ್ಸ್‌ ಪ್ರತಿಭಟನೆಯಲ್ಲಿಯೂ ಸಹ ಭಾಗವಹಿಸಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಈ ಎರಡೂ ಪ್ರತಿಭಟನೆಯಲ್ಲಿಯೂ ನೀಲಮ್‌ ಬಂಧನಕ್ಕೊಳಗಾಗಿದ್ದಳು.

andolana

Recent Posts

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

4 mins ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

14 mins ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

23 mins ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

1 hour ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

1 hour ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

2 hours ago