BREAKING NEWS

ಸಂಸತ್‌ ಭದ್ರತಾ ಲೋಪ; 4 ಡಿಗ್ರಿ ಹೊಂದಿದ್ದ ನೀಲಮ್‌ ಅಜಾದ್‌; ಈ ಹಿಂದೆಯೂ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ರು!

ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಪೈಕಿ ನೀಲಮ್‌ ತಾಯಿ ನೀಡಿರುವ ಮಾಹಿತಿ ಪ್ರಕಾರ ನೀಲಮ್‌ ನಿರುದ್ಯೋಗದ ಬಗ್ಗೆ ಚಿಂತಿತಳಾಗಿದ್ದಳು. ಒಳ್ಳೆಯ ವಿದ್ಯಾಭ್ಯಾಸ ಪಡೆದರೂ ಕೆಲಸ ಸಿಗುತ್ತಿಲ್ಲ, ಇದಕ್ಕಿಂತ ಸಾಯುವುದೇ ಒಳ್ಳೆಯದು ಎಂದು ತನ್ನ ತಾಯಿಯ ಬಳಿ ನೀಲಮ್‌ ಹೇಳಿದ್ದಳಂತೆ. ಇನ್ನು ಹರಿಯಾಣದ ಜಿಂದ್‌ ಮೂಲದ ನೀಲಮ್‌ 30 ವರ್ಷ ವಯಸ್ಸಿನವಳಾಗಿದ್ದು ಬಿಎ, ಎಂಎ, ಬಿಎಡ್‌, ಎಂಎಡ್‌ ಹಾಗೂ ನೀಟ್‌ ಪದವಿಗಳನ್ನು ಹೊಂದಿದ್ದಾಳೆ. ಇದಾದ ಬಳಿಕ ಹಲವಾರು ದಿನಗಳ ಕಾಲ ನಿರುದ್ಯೋಗಿಯಾಗಿದ್ದ ನೀಲಮ್ ಹರಿಯಾಣ ನಾಗರೀಕ ಸೇವೆಗಳ ಪರೀಕ್ಷೆಗೂ ಸಹ ಸಿದ್ಧತೆಪಡಿಸಿಕೊಳ್ಳುತ್ತಿದ್ದಳಂತೆ.

ಈಕೆಯ ಕುರಿತು ಮಾತನಾಡಿರುವ ಕುಟುಂಬಸ್ಥರು ಈಕೆಗೆ ಯಾವುದೇ ಸಂಘಟನೆಗಳ ಜತೆ ಹಾಗೂ ಪಕ್ಷಗಳ ಜತೆ ನಂಟಿಲ್ಲ ಎಂದು ಹೇಳಿದ್ದು ಈ ಹಿಂದೆ 2020-2021ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಳು ಹಾಗೂ ಇದೇ ವರ್ಷ ನಡೆದಿದ್ದ ರೆಸ್ಲರ್ಸ್‌ ಪ್ರತಿಭಟನೆಯಲ್ಲಿಯೂ ಸಹ ಭಾಗವಹಿಸಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಈ ಎರಡೂ ಪ್ರತಿಭಟನೆಯಲ್ಲಿಯೂ ನೀಲಮ್‌ ಬಂಧನಕ್ಕೊಳಗಾಗಿದ್ದಳು.

andolana

Recent Posts

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

16 mins ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

28 mins ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

39 mins ago

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…

1 hour ago

ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

1 hour ago

ಅಕ್ರಮ ಶೆಡ್‌ ತೆರವು ವಿಚಾರ: ಅರ್ಹರಿಗೆ ಮಾತ್ರ ಮನೆ ಎಂದ ಭೈರತಿ ಸುರೇಶ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…

2 hours ago