BREAKING NEWS

ಜನರಿಂದ ಅರ್ಜಿ ಸ್ವೀಕರಿಸಿದರೆ ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

ಹಾಸನ : ಜನರಿಂದ ಅರ್ಜಿ ಸ್ವೀಕರಿಸುವ ಅಧಿಕಾರಿಗಳು ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ, ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ಜನರು ಬೆಂಗಳೂರಿನವರೆಗೂ ನನ್ನನ್ನು ಹುಡುಕಿಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸ್ಥಳೀಯ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಬೇಕು. ರೈತರು ಮತ್ತು ಶ್ರಮಿಕರ ಸಮಸ್ಯೆಗಳು ಬಹುತೇಕ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಬೇಕು ಎಂದರು.

ಅನಗತ್ಯ ಸತಾಯಿಸುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾವುದೇ ಪ್ರಭಾವಕ್ಕೂ ಮಣಿಯುವುದಿಲ್ಲ. ಕಠಿಣ ಕ್ರಮ ಖಚಿತ. ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಬೇಕು. ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸುವುದು ಭ್ರಷ್ಟಾಚಾರ. ಜನರಿಗೆ ಅಧಿಕಾರಿಗಳ ಅನುಕಂಪ ಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದರೆ ಸಾಕು. ಅಧಿಕಾರಿಗಳು ಮತ್ತು ನಾವು ಜನರ ಸೇವಕರು. ಜನರೇ ನಮ್ಮ ಮಾಲೀಕರು. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿಸಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಎಲ್ಲಾ ವರ್ಗ, ಎಲ್ಲಾ ಜಾತಿ, ಎಲ್ಲಾ ಧರ್ಮಗಳಿಗೂ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳನ್ನು  ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯ ಸಾಧನೆ ಶೇ100 ರಷ್ಟು ಸಾಧಿಸಬೇಕು. ಆದರೆ ಹಾಸನ ಜಿಲ್ಲೆಯಲ್ಲಿ ಇನ್ನೂ ಶೇ.90 ರಷ್ಟಕ್ಕೆ ನಿಂತಿದೆ. ಇದನ್ನು ಶೇ 100 ರಷ್ಟು ಪೂರೈಸಬೇಕು. ನೋಂದಣಿ ಮಾಡಿಸಿರುವ ಪ್ರತಿಯೊಬ್ಬರಿಗೂ ಗ್ಯಾರಂಟಿ ಸ್ಕೀಂಗಳು ತಲುಪಬೇಕು.  ಹಾಸನ, ಅರಸೀಕರೆ, ಅರಕಲಗೂಡು ತಾಲ್ಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳು ಶೇ 90 ರಷ್ಟನ್ನೂ ತಲುಪದೆ ಇರಲು ಯಾರು ಹೊಣೆ? ಎಂದು ಅಧಿಕಾರಿಗಳು ಮುಖ್ಯಮಂತ್ರಿ ಪ್ರಶ್ನಿಸಿದರು.

https://x.com/CMofKarnataka/status/1721858222355833274?s=20

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago