BREAKING NEWS

ರೈತರಿಗೆ 9 ಗಂಟೆ ಉಚಿತ ವಿದ್ಯುತ್‌ಗೆ ಕ್ರಮ: ಜನಾರ್ದನ ರೆಡ್ಡಿ

ಹಿರಿಯೂರು: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಅಧಿಕಾರಕ್ಕೆ ತಂದಲ್ಲಿ ಮಹಿಳೆಯರ ಖಾತೆಗೆ ತಿಂಗಳಿಗೆ 2500, ರೈತರಿಗೆ ನಿರಂತರ 9 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಭರವಸೆ ನೀಡಿದರು.

ತಾಲ್ಲೂಕಿನ ಐಮಂಗಲ ಮತ್ತು ಸೊಂಡೆಕೆರೆ ಗ್ರಾಮದಲ್ಲಿ ಭಾನುವಾರ ತಮ್ಮ ಪಕ್ಷದ ಅಭ್ಯರ್ಥಿ ಗನ್ನಾಯಕನಹಳ್ಳಿ ಎಚ್. ಮಹೇಶ್ ಪರವಾಗಿ ಏರ್ಪಡಿಸಿದ್ದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.

‘ರಾಷ್ಟ್ರೀಯ ಪಕ್ಷಗಳು ಇದುವರೆಗೂ ಜನತೆಗೆ ಹುಸಿ ಭರವಸೆಗಳನ್ನು ನೀಡುವ ಮೂಲಕ ಹಣವನ್ನು ಕೊಳ್ಳೆ ಹೊಡೆಯುತ್ತಿವೆ. ಅಭಿವೃದ್ಧಿ ಬಗ್ಗೆ ಕೇಂದ್ರದ ನಾಯಕರಿಗೆ ಗಮನವಿಲ್ಲ. ನೆರೆಯ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ನೀರಾವರಿ ವಿಚಾರದಲ್ಲಿ ಆಗಿರುವ ಅಭಿವೃದ್ಧಿ ನಮ್ಮಲ್ಲಿ ಏಕೆ ಆಗುತ್ತಿಲ್ಲ. ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದಲ್ಲಿ ಮಾತ್ರ ಸರ್ವತೋಮುಖ ಅಭಿವೃದ್ಧಿ ಎಂಬುದನ್ನು ನೆರೆಯ ರಾಜ್ಯಗಳನ್ನು ನೋಡಿ ಮತದಾರರು ತೀರ್ಮಾನಿಸಬೇಕು’ ಎಂದು ಮನವಿ ಮಾಡಿದರು.

‘ನಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಬಸವೇಶ್ವರರ ಹೆಸರಿನಲ್ಲಿ ರೈತ ಭರವಸೆಯ ಕೇಂದ್ರ ಆರಂಭಿಸಿ ರಾಜ್ಯದಾದ್ಯಂತ ಬಡರೈತರಿಗೆ ವರ್ಷಕ್ಕೆ ₹ 15 ಸಾವಿರ ನೀಡುತ್ತೇವೆ. ಜಮೀನು ಅಭಿವೃದ್ಧಿಗೆ ₹ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಬೆಳೆ ವಿಮೆ ಕಂತನ್ನು ರೈತರ ಬದಲು ತಮ್ಮ ಪಕ್ಷದ ವತಿಯಿಂದ ಭರಿಸುತ್ತೇವೆ. ಒಮ್ಮೆ ಅವಕಾಶ ಕೊಡಿ’ ಎಂದು ಮನವಿ ಮಾಡಿದರು.

‘ಐಮಂಗಲ ಹೋಬಳಿಯ ಚಿಕ್ಕಸಿದ್ದವ್ವನಹಳ್ಳಿ, ಭರಂಪುರ ಕೆರೆಗಳಿಗೆ ಕಾಯಕಲ್ಪ, ವಿವಿ ಸಾಗರ ಪ್ರದೇಶವನ್ನು ಸುಂದರ ಪ್ರವಾಸಿ ತಾಣವನ್ನಾಗಿಸುತ್ತೇವೆ. ಇಡೀ ತಾಲ್ಲೂಕಿನ ಬರಡು ಭೂಮಿಗೆ ನೀರು ಕೊಡುವ ಕೆಲಸ ಮಾಡಲಾಗುವುದು’ ಎಂದರು.

ಪಕ್ಷದ ಅಭ್ಯರ್ಥಿ ಎಚ್. ಮಹೇಶ್, ಹರಳಯ್ಯ ಗುರುಪೀಠದ ಬಸವಹರಳಯ್ಯ ಸ್ವಾಮೀಜಿ ಮಾತನಾಡಿದರು. ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಹೇಮಲತಾ, ಪ್ರಸಾದನಾಯ್ಕ, ಜಯಶೀಲರೆಡ್ಡಿ, ಕಾಂತಯ್ಯ, ರಾಧಾಕೃಷ್ಣ, ಬಿ. ತಿಪ್ಪೇಸ್ವಾಮಿ, ಸುಶೀಲಮ್ಮ ಇದ್ದರು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

7 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

10 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

12 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

12 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

13 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

13 hours ago