ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು.
2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್ನ ಪೀಠವು, ಈ ಕುರಿತು ಆರ್ಎಸ್ಎಸ್ನ ಚಿಂತಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ, ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು, ಅರ್ಜಿದಾರರು ಎತ್ತಿರುವ ಆಕ್ಷೇಪಗಳನ್ನು ಗಮನದಲ್ಲಿ ಇರಿಸಿಕೊಂಡು ಹಕ್ಕುಸ್ವಾಮ್ಯ ರಕ್ಷಿಸುವ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿತು.
‘ಅಗತ್ಯ ಸಲಹೆಗಳನ್ನು ನೀವೂ ನೀಡಬಹುದು’ ಎಂದು ಗೋವಿಂದಾಚಾರ್ಯ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ವಿರಾಗ್ ಗುಪ್ತಾ ಅವರಿಗೆ ಪೀಠ ತಿಳಿಸಿತು. ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.
‘ನೇರ ಪ್ರಸಾರದ ಹಕ್ಕುಸ್ವಾಮ್ಯ ರಕ್ಷಣೆಗೆ 2018ರ ತೀರ್ಪಿಗೆ ಅನುಗುಣವಾಗಿ ಕೋರ್ಟ್ನ ರಿಜಿಸ್ಟ್ರಿಯು ಯಾವುದೇ ಕ್ರಮವಹಿಸಿಲ್ಲ ಎಂದು ಟೀಕಿಸುವುದು ಸುಲಭ. ಆದರೆ, ಥರ್ಡ್ ಪಾರ್ಟಿ ತಂತ್ರಾಂಶಗಳ ನೆರವಿಲ್ಲದೆ ನೇರ ಪ್ರಸಾರ ಮಾಡುವಷ್ಟು ತಾಂತ್ರಿಕ ಮೂಲಸೌಕರ್ಯ ನಮ್ಮಲ್ಲಿ ಇಲ್ಲ ಎಂದು ಎಂದು ಎನ್ಐಸಿ ಹೇಳಿದೆ. ಈ ಹಂತದಲ್ಲಿ ಏನು ಕ್ರಮವಹಿಸಬೇಕು ಎಂದೂ ನೀವು ಸಲಹೆ ನೀಡಿ ಎಂದೂ ಪೀಠ ಗೋವಿಂದಾಚಾರ್ಯ ಅವರ ವಕೀಲರಿಗೆ ತಿಳಿಸಿತು.
ಗೋವಿಂದಾಚಾರ್ಯ ಅವರು ತಮ್ಮ ಅರ್ಜಿಯಲ್ಲಿ, ನೇರಪ್ರಸಾರ ವಿಷಯದಲ್ಲಿ ಕಲಾಪದ ಹಕ್ಕುಸ್ವಾಮ್ಯ ಉಳಿಸಿಕೊಳ್ಳಬೇಕು. ಕಲಾಪದ ಮುದ್ರಣವನ್ನು ಜಾಲತಾಣವು, ಸದ್ಯ (ಯೂಟ್ಯೂಬ್) ವಾಣಿಜ್ಯದ ದೃಷ್ಟಿಯಿಂದ ಬಳಸದಂತೆ ಎಚ್ಚರವಹಿಸಬೇಕು ಎಂದು ಪ್ರತಿಪಾದಿಸಿದ್ದರು.
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…
ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…