BREAKING NEWS

ಜಾಲತಾಣದಲ್ಲಿ ಕೋರ್ಟ್ ಕಲಾಪ ಹಕ್ಕು ಸ್ವಾಮ್ಯ ರಕ್ಷಣೆಗೆ ಕ್ರಮ: ಸುಪ್ರೀಂ ಕೋರ್ಟ್‌

ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು.

2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್‌ನ ಪೀಠವು, ಈ ಕುರಿತು ಆರ್‌ಎಸ್‌ಎಸ್‌ನ ಚಿಂತಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ, ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು, ಅರ್ಜಿದಾರರು ಎತ್ತಿರುವ ಆಕ್ಷೇಪಗಳನ್ನು ಗಮನದಲ್ಲಿ ಇರಿಸಿಕೊಂಡು ಹಕ್ಕುಸ್ವಾಮ್ಯ ರಕ್ಷಿಸುವ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿತು.

‘ಅಗತ್ಯ ಸಲಹೆಗಳನ್ನು ನೀವೂ ನೀಡಬಹುದು’ ಎಂದು ಗೋವಿಂದಾಚಾರ್ಯ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ವಿರಾಗ್ ಗುಪ್ತಾ ಅವರಿಗೆ ಪೀಠ ತಿಳಿಸಿತು. ಹೆಚ್ಚುವರಿ ಸಾಲಿಸಿಟರ್ ಜನರಲ್‌ ಐಶ್ವರ್ಯ ಭಾಟಿ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.

‘ನೇರ ಪ್ರಸಾರದ ಹಕ್ಕುಸ್ವಾಮ್ಯ ರಕ್ಷಣೆಗೆ 2018ರ ತೀರ್ಪಿಗೆ ಅನುಗುಣವಾಗಿ ಕೋರ್ಟ್‌ನ ರಿಜಿಸ್ಟ್ರಿಯು ಯಾವುದೇ ಕ್ರಮವಹಿಸಿಲ್ಲ ಎಂದು ಟೀಕಿಸುವುದು ಸುಲಭ. ಆದರೆ, ಥರ್ಡ್‌ ಪಾರ್ಟಿ ತಂತ್ರಾಂಶಗಳ ನೆರವಿಲ್ಲದೆ ನೇರ ಪ್ರಸಾರ ಮಾಡುವಷ್ಟು ತಾಂತ್ರಿಕ ಮೂಲಸೌಕರ್ಯ ನಮ್ಮಲ್ಲಿ ಇಲ್ಲ ಎಂದು ಎಂದು ಎನ್‌ಐಸಿ ಹೇಳಿದೆ. ಈ ಹಂತದಲ್ಲಿ ಏನು ಕ್ರಮವಹಿಸಬೇಕು ಎಂದೂ ನೀವು ಸಲಹೆ ನೀಡಿ ಎಂದೂ ಪೀಠ ಗೋವಿಂದಾಚಾರ್ಯ ಅವರ ವಕೀಲರಿಗೆ ತಿಳಿಸಿತು.

ಗೋವಿಂದಾಚಾರ್ಯ ಅವರು ತಮ್ಮ ಅರ್ಜಿಯಲ್ಲಿ, ನೇರಪ್ರಸಾರ ವಿಷಯದಲ್ಲಿ ಕಲಾಪದ ಹಕ್ಕುಸ್ವಾಮ್ಯ ಉಳಿಸಿಕೊಳ್ಳಬೇಕು. ಕಲಾಪದ ಮುದ್ರಣವನ್ನು ಜಾಲತಾಣವು, ಸದ್ಯ (ಯೂಟ್ಯೂಬ್) ವಾಣಿಜ್ಯದ ದೃಷ್ಟಿಯಿಂದ ಬಳಸದಂತೆ ಎಚ್ಚರವಹಿಸಬೇಕು ಎಂದು ಪ್ರತಿಪಾದಿಸಿದ್ದರು.

 

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

42 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago