BREAKING NEWS

ಜಾಲತಾಣದಲ್ಲಿ ಕೋರ್ಟ್ ಕಲಾಪ ಹಕ್ಕು ಸ್ವಾಮ್ಯ ರಕ್ಷಣೆಗೆ ಕ್ರಮ: ಸುಪ್ರೀಂ ಕೋರ್ಟ್‌

ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು.

2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್‌ನ ಪೀಠವು, ಈ ಕುರಿತು ಆರ್‌ಎಸ್‌ಎಸ್‌ನ ಚಿಂತಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ, ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು, ಅರ್ಜಿದಾರರು ಎತ್ತಿರುವ ಆಕ್ಷೇಪಗಳನ್ನು ಗಮನದಲ್ಲಿ ಇರಿಸಿಕೊಂಡು ಹಕ್ಕುಸ್ವಾಮ್ಯ ರಕ್ಷಿಸುವ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿತು.

‘ಅಗತ್ಯ ಸಲಹೆಗಳನ್ನು ನೀವೂ ನೀಡಬಹುದು’ ಎಂದು ಗೋವಿಂದಾಚಾರ್ಯ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ವಿರಾಗ್ ಗುಪ್ತಾ ಅವರಿಗೆ ಪೀಠ ತಿಳಿಸಿತು. ಹೆಚ್ಚುವರಿ ಸಾಲಿಸಿಟರ್ ಜನರಲ್‌ ಐಶ್ವರ್ಯ ಭಾಟಿ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.

‘ನೇರ ಪ್ರಸಾರದ ಹಕ್ಕುಸ್ವಾಮ್ಯ ರಕ್ಷಣೆಗೆ 2018ರ ತೀರ್ಪಿಗೆ ಅನುಗುಣವಾಗಿ ಕೋರ್ಟ್‌ನ ರಿಜಿಸ್ಟ್ರಿಯು ಯಾವುದೇ ಕ್ರಮವಹಿಸಿಲ್ಲ ಎಂದು ಟೀಕಿಸುವುದು ಸುಲಭ. ಆದರೆ, ಥರ್ಡ್‌ ಪಾರ್ಟಿ ತಂತ್ರಾಂಶಗಳ ನೆರವಿಲ್ಲದೆ ನೇರ ಪ್ರಸಾರ ಮಾಡುವಷ್ಟು ತಾಂತ್ರಿಕ ಮೂಲಸೌಕರ್ಯ ನಮ್ಮಲ್ಲಿ ಇಲ್ಲ ಎಂದು ಎಂದು ಎನ್‌ಐಸಿ ಹೇಳಿದೆ. ಈ ಹಂತದಲ್ಲಿ ಏನು ಕ್ರಮವಹಿಸಬೇಕು ಎಂದೂ ನೀವು ಸಲಹೆ ನೀಡಿ ಎಂದೂ ಪೀಠ ಗೋವಿಂದಾಚಾರ್ಯ ಅವರ ವಕೀಲರಿಗೆ ತಿಳಿಸಿತು.

ಗೋವಿಂದಾಚಾರ್ಯ ಅವರು ತಮ್ಮ ಅರ್ಜಿಯಲ್ಲಿ, ನೇರಪ್ರಸಾರ ವಿಷಯದಲ್ಲಿ ಕಲಾಪದ ಹಕ್ಕುಸ್ವಾಮ್ಯ ಉಳಿಸಿಕೊಳ್ಳಬೇಕು. ಕಲಾಪದ ಮುದ್ರಣವನ್ನು ಜಾಲತಾಣವು, ಸದ್ಯ (ಯೂಟ್ಯೂಬ್) ವಾಣಿಜ್ಯದ ದೃಷ್ಟಿಯಿಂದ ಬಳಸದಂತೆ ಎಚ್ಚರವಹಿಸಬೇಕು ಎಂದು ಪ್ರತಿಪಾದಿಸಿದ್ದರು.

 

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

11 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

11 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

12 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

12 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

12 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

12 hours ago