BREAKING NEWS

ಜೆನರಿಕ್‌ ಔಷಧ ಬರೆಯದಿದ್ದರೆ ಕ್ರಮ: ಸರಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ಕೇಂದ್ರ ಸರಕಾರ ನಡೆಸುವ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್‌ ಔಷಧಗಳನ್ನು ಬರೆದುಕೊಡದ ವೈದ್ಯರ ವಿರುದ್ಧ ಕ್ರಮ ಜರುಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಎಚ್ಚರಿಸಿದೆ.

ಜೆನರಿಕ್‌ ಔಷಧಗಳನ್ನು ಮಾತ್ರ ಬರೆಯುವಂತೆ ಕೇಂದ್ರ ಸರಕಾರಿ ಆಸ್ಪತ್ರೆಗಳು, ಕೇಂದ್ರ ಸರಕಾರ ಆರೋಗ್ಯ ಯೋಜನೆ (ಸಿಜಿಎಚ್‌ಎಸ್‌) ಅಡಿಯ ‘ಕ್ಷೇಮ ಕೇಂದ್ರಗಳು’ ಮತ್ತು ಪಾಲಿ ಕ್ಲಿನಿಕ್‌ಗಳ ವೈದ್ಯರಿಗೆ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೂ ವೈದ್ಯರು ಕೆಲವು ಸಂದರ್ಭಗಳಲ್ಲಿ ಬ್ರಾಂಡೆಡ್‌ ಔಷಧ ಬರೆಯುವುದನ್ನು ಮುಂದುವರೆಸಿದ್ದಾರೆ.
ಉನ್ನತ ಅಧಿಕಾರಿಗಳ ತನಿಖೆಯಲ್ಲಿ ಈ ವಿಚಾರ ಖಚಿತಪಟ್ಟ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎಚ್ಚರಿಕೆ ರವಾನಿಸಲಾಗಿದೆ,” ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ ಅತುಲ್‌ ಗೋಯೆಲ್‌ ಹೇಳಿದ್ದಾರೆ.
ಎಲ್ಲಾ ಸಂಸ್ಥೆಗಳ ಮುಖ್ಯಸ್ಥರು ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅಧೀನ ವೈದ್ಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ, ಯಾವುದೇ ಖಾಸಗಿ ಔಷಧ ಕಂಪನಿಯ ಪ್ರತಿನಿಧಿಗಳು ಸರಕಾರಿ ಆಸ್ಪತ್ರೆಗಳ ಆವರಣಕ್ಕೆ ಬರದಂತೆ ಸೂಕ್ತ ಕ್ರಮ ವಹಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

8 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

8 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

9 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

9 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

9 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

9 hours ago