BREAKING NEWS

ಜೆನರಿಕ್‌ ಔಷಧ ಬರೆಯದಿದ್ದರೆ ಕ್ರಮ: ಸರಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ಕೇಂದ್ರ ಸರಕಾರ ನಡೆಸುವ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್‌ ಔಷಧಗಳನ್ನು ಬರೆದುಕೊಡದ ವೈದ್ಯರ ವಿರುದ್ಧ ಕ್ರಮ ಜರುಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಎಚ್ಚರಿಸಿದೆ.

ಜೆನರಿಕ್‌ ಔಷಧಗಳನ್ನು ಮಾತ್ರ ಬರೆಯುವಂತೆ ಕೇಂದ್ರ ಸರಕಾರಿ ಆಸ್ಪತ್ರೆಗಳು, ಕೇಂದ್ರ ಸರಕಾರ ಆರೋಗ್ಯ ಯೋಜನೆ (ಸಿಜಿಎಚ್‌ಎಸ್‌) ಅಡಿಯ ‘ಕ್ಷೇಮ ಕೇಂದ್ರಗಳು’ ಮತ್ತು ಪಾಲಿ ಕ್ಲಿನಿಕ್‌ಗಳ ವೈದ್ಯರಿಗೆ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೂ ವೈದ್ಯರು ಕೆಲವು ಸಂದರ್ಭಗಳಲ್ಲಿ ಬ್ರಾಂಡೆಡ್‌ ಔಷಧ ಬರೆಯುವುದನ್ನು ಮುಂದುವರೆಸಿದ್ದಾರೆ.
ಉನ್ನತ ಅಧಿಕಾರಿಗಳ ತನಿಖೆಯಲ್ಲಿ ಈ ವಿಚಾರ ಖಚಿತಪಟ್ಟ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎಚ್ಚರಿಕೆ ರವಾನಿಸಲಾಗಿದೆ,” ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ ಅತುಲ್‌ ಗೋಯೆಲ್‌ ಹೇಳಿದ್ದಾರೆ.
ಎಲ್ಲಾ ಸಂಸ್ಥೆಗಳ ಮುಖ್ಯಸ್ಥರು ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅಧೀನ ವೈದ್ಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ, ಯಾವುದೇ ಖಾಸಗಿ ಔಷಧ ಕಂಪನಿಯ ಪ್ರತಿನಿಧಿಗಳು ಸರಕಾರಿ ಆಸ್ಪತ್ರೆಗಳ ಆವರಣಕ್ಕೆ ಬರದಂತೆ ಸೂಕ್ತ ಕ್ರಮ ವಹಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago